Headlines

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More

ಮಾ.09 ರಿಂದ 15 ರವರೆಗೆ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಜಗನ್ಮಾತೆ ಪದ್ಮಾವತಿ ದೇವಿಯ ಮಹಾರಥೋತ್ಸವ…

ರಿಪ್ಪನ್ ಪೇಟೆ: ಜೈನರ ದಕ್ಷಿಣ ಕಾಶಿಯೆಂದೇ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥ ಯಾತ್ರಾ ಮಹೋತ್ಸವವು ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುರುವಾರ (ಮಾ. 9) ಶ್ರೀ ಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ, 10ರಂದು ಮಕ್ಕಳ ಬಸದಿಯಲ್ಲಿ ಶ್ರೀ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ತೀ ನಾ ಶ್ರೀನಿವಾಸ್| ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು..!!

ನೀರಿನಲ್ಲಿ ಆಟ ಆಡಲು ಹೋದ 12 ವರ್ಷದ ಬಾಲಕಿ ನೀರುಪಾಲು ! ಭದ್ರಾವತಿ : ಕಾಳನಕಟ್ಟೆಯಲ್ಲಿ ಭದ್ರಾ ನದಿಯ ಚಾನೆಲ್  ನೀರಿನಲ್ಲಿ ಆಡಲು ಹೋದ ಬಾಲಕಿ ನೀರು ಪಾಲಾಗಿದ್ದು ಆಕೆಗಾಗಿ ಹುಡುಕಾಟ ಆರಂಭವಾಗಿದೆ. ಕಾಳನಕಟ್ಟೆಯಲ್ಲಿ ಭದ್ರ ನದಿಯ ಚಾನೆಲ್ ನೀರಿನಲ್ಲಿ ಇದೇ ಗ್ರಾಮದ ಮಹಿಳೆಯೊಬ್ಬರು ಬಟ್ಟೆ ತೊಳೆಯಲು ಮುಂದಾಗಿದ್ದರು. ಈ ವೇಳೆ ನೀರಿನಲ್ಲಿ ಆಟವಾಡಲು ಬಯಸಿದ ಮಹಿಳೆಯ 12 ವರ್ಷದ ಮಗಳು ಚಾನೆಲ್ ನೀರು ಪಾಲಾಗಿದ್ದಾಳೆ. ತಾಯಿ ಸುಂದರಮ್ಮ ಈಜು ಕಲಿಯತಿದ್ದರಿಂದ ನೀರಿಗಿಳಿದು ಹುಡುಕಾಡಿದ್ದಾರೆ. ಮಗಳು ಸಿಗದ…

Read More

ಕಲುಷಿತಗೊಂಡಿದ್ದ ಕುಡಿಯುವ ನೀರಿನ ಬಾವಿ – ಬಾವಿಗಿಳಿದು ಸ್ವಚ್ಚಗೊಳಿಸಿದ ಗ್ರಾಪಂ ಸದಸ್ಯ : ಪ್ರಶಂಸೆಗಳ ಸುರಿಮಳೆ|inspiration news

ಸ್ವಚ್ಚತೆ ಇಲ್ಲದೆ ದೇಶವಿಲ್ಲ. ಸಚ್ಚತೆಯೆಂಬುದು ದೇಶದ ಪ್ರಗತಿಯಾಗಿದೆ. ಈ ಯೋಜನೆಯು ಜನರ ಹಾಗು ದೇಶದ ಹಿತವನ್ನು ಬಯಸುತ್ತದೆ. ಸ್ವಚ್ಚಂದವಾದ ಪರಿಸರವನ್ನು ಅಥವಾ ವಾತವರಣವನ್ನು ನೋಡಬಹುದು. ಈ ಸ್ವಚ್ಚ ಭಾರತ ಅಭಿಯಾನ ಗಾಂಧೀಜಿಯವರು ಕಂಡ ಕನಸಾಗಿತ್ತು. ಇಂತಹ ಸ್ವಚ್ಚ ಅಭಿಯಾನವನ್ನು ಹಲವಾರು ರೀತಿಯಲ್ಲಿ ಮಾಡಿರುವುದನ್ನು ನೋಡಿದ್ದೇವೆ ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸ್ವಚ್ಚ ಅಭಿಯಾನವನ್ನು ವಿಶೇಷ ರೀತಿಯಲ್ಲಿ ನಡೆಸಿದ್ದಾರೆ.ಹೌದು…ಅಮೃತ ಗ್ರಾಪಂ ಸದಸ್ಯರಾದ ಸುರೇಶ್ ರವರು ಸ್ವಚ್ಚ ಅಭಿಯಾನದಡಿಯಲ್ಲಿ ಅಂತಹದೊಂದು ಕೆಲಸ ಮಾಡಿದ್ದಾರೆ….

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಕುಕ್ಕರ್ ಬ್ಲಾಸ್ಟ್ ಪ್ರಕರಣ – ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಶಾರೀಖ್ ಸ್ಥಳ ಮಹಜರು|crime news

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಖ್ ಸ್ಥಳ ಮಹಜರು ಮಾಡಲಾಗಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ‌ ಸ್ಥಳ ಮಹಜರ್ ಗೆ ಎನ್ ಐಎ ಅಧಿಕಾರಿಗಳು ಕರೆತಂದಿದ್ದಾರೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್‌ ಐಎ ತೀವ್ರಗೊಳಿಸಿದ್ದಾರೆ. ಮಂಗಳವಾರ ( ಮಾ. 8 ರಂದು) ಶಾರಿಕ್ ನನ್ನು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ‌…

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

ಆನಂದಪುರದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ಹೊಸನಗರದಲ್ಲಿ ಹೆಜ್ಜೇನು ದಾಳಿ|CRIME NEWS

ಸಾಗರ :  ತಾಲೂಕಿನ ಆನಂದಪುರದ ಗಾಣಿಗನ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆನಂದಪುರದ ಜೆಡಿಸರ ಹೋಗುವ ರಸ್ತೆಯ ಕೆರೆಯ ಬಳಿ ಇದೀಗ ಮಹಿಳೆಯ ಶವ ಪತ್ತೆಯಾಗಿದೆ.ಮೃತ ಮಹಿಳೆ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಇದೀಗ ಗಾಣಿಗನ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಸಾವಿಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೇನು ದಾಳಿ – ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ…

Read More
Exit mobile version