Headlines

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ ಮೆಚ್ಚುಗೆಗೆ ಬಿಜೆಪಿ ಪಾತ್ರವಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ|BJP

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ  ಮೆಚ್ಚುಗೆಗೆ ಬಿಜೆಪಿ ಪಾತ್ರ ಆಗುತ್ತಿದೆ – ಗೃಹಸಚಿವ ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅತ್ಯಂತ ಸಂತೋಷದಾಯಕವಾದ ದಿನ, ನಮ್ಮ ಇಶಾನ್ಯ ರಾಜ್ಯಗಳಲ್ಲಿ ಮೂರು ರಾಜ್ಯದಲ್ಲಿ ಚುನಾವಣೆ ನೆಡೆದಿತ್ತು. ಇಂದು ಫಲಿತಾಂಶ ಹೊರ ಬಂದಿದೆ. ಮೂರರಲ್ಲಿ ಎರಡು ಸ್ಪಷ್ಟ ಬಹುಮತವನ್ನು ಪಡೆದು ತನ್ನ ರಾಜ್ಯಭಾರ ಮಾಡಲು ಸಜ್ಜಾಗಿದೆ. ಇನ್ನೊಂದು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಕೊಪ್ಪ ಸರ್ಕಲ್ ನಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮ…

Read More

ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ಬೇಲಿ ಸವರುವಾಗ ಹೆಜ್ಜೇನು ದಾಳಿ – ಗಂಡ,ಹೆಂಡತಿಗೆ ಐಸಿಯು ನಲ್ಲಿ ಚಿಕಿತ್ಸೆ|honeybee

ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ ಹಿನ್ನಲೆಯಲ್ಲಿ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಲಿ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ರಿಪ್ಪನ್‌ಪೇಟೆ : ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ|BJP

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ತಳಲೆ ವಾರ್ಡ್ ನ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಕ್ಷದ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಫೆ.25 ರಂದು ನಡೆದ ಉಪ ಚುನಾವಣೆಯಲ್ಲಿ ಸಮೀಪದ ಸ್ಪರ್ಧಿಗಿಂತ 87 ಮತಗಳ ಅಂತರದಿಂದ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More
Exit mobile version