Headlines

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ|athin blevin

ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು  ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ. ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು…

Read More

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು|death

ಶಿವಮೊಗ್ಗ : ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಬಾಲಕ ತುಂಗಾ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೂಸಫ್ (14) ಮೃತಪಟ್ಟಿರುವ ಯುವಕನಾಗಿದ್ದಾನೆ. ಯೂಸುಫ್ ಇಂದು ಮೂವರು ಸ್ನೇಹಿತರೊಂದಿಗೆ ನದಿಗೆ ಈಜಲು ಹೋಗಿ ನೀರು ಪಾಲಾಗಿದ್ದನು,ಆತನ ಸ್ನೇಹಿತರು ಸ್ಥಳೀಯರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹುಡುಕಾಟ ಆರಂಭಿಸಿದ್ದರು ಸುಮಾರು ಒಂದುವರೆ ಗಂಟೆ ಹುಡುಕಾಟ ನಡೆಸಿದ ನಂತರ ಮೃತದೇಹ ದೊರಕಿದೆ.ತಕ್ಷಣವೇ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಆತನ ಸಾವನ್ನ…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್‌ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…

Read More

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವಂತೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಯಿಂದ ಲೋಕಾರ್ಪಣೆಗೊಳ್ಳಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರಿಡುವುದು ಸೂಕ್ತ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ರಾಷ್ಟ್ರ ಕವಿ ಕುವೆಂಪು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪರ್ವತ ಶ್ರೇಣಿ ತಪ್ಪಲಿನ ತೀರ್ಥಹಳ್ಳಿಯವರಾಗಿದ್ದು…

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More