Headlines

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More