ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ಬರ್ತ್ ಡೇ ಪಾರ್ಟಿಯಲ್ಲಿ ನಾಲ್ವರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಪ್ರಕರಣ ದಾಖಲು|assault

ಭದ್ರಾವತಿಯಲ್ಲಿ  ಹುಟ್ಟುಹಬ್ಬದ ಪಾರ್ಟಿ ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು ಶಿವಮೊಗ್ಗದ ಸೋಷಿಯಲ್ ಹಾರ್ಬರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ (ಅ) ಘಟಕದ ನೂತನ ಅಧ್ಯಕ್ಷರಾಗಿ ಆಸೀಫ಼್ ಭಾಷಾ ನೇಮಕ|congress

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ…

Read More

ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…

Read More

ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More

ರಾಷ್ಟ್ರೀಯ ಕ್ರೀಡಾಪಟು ಬೆಳ್ಳಿ ಭರತ್ ರಾಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ|volleyball

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ದಿವಂಗತ ಭರತ್ ರಾಜ್ ( ಬೆಳ್ಳಿ ) ಸ್ಮರಣಾರ್ಥ ವರಸಿದ್ದಿ ವಿನಾಯಕ ವಾಲಿಬಾಲ್ ಕ್ಲಬ್ ಹಾರಂಬಳ್ಳಿ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ವಾಲಿಬಾಲ್ ಪಂದ್ಯಾವಳಿಯು ಭಾರಿ ಅದ್ದೂರಿಯಾಗಿ ನಡೆಯಿತು. ವಾಲಿಬಾಲ್ ಪಂದ್ಯಾವಳಿಯನ್ನು ಯುವ ಉದ್ಯಮಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂತೋಷ್ ಆಶ್ರೀತಾ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದ ಯುವಕರು ಕ್ರೀಡಾಕೂಟದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಧ್ಬುತ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More