ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad
ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…


