Headlines

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಈಡಿ ದಾಳಿ ರಾಜಕೀಯ ಪ್ರೇರಿತ|ED

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ರಿಪ್ಪನ್‌ಪೇಟೆ : ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಗೌಡ ಅವರ ಮನೆ ಮೇಲೆ ನಡೆದ ಈಡಿ ದಾಳಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯವಾಗಿ ಅವರನ್ನು ಎದುರಿಸಲು ಸಾಧ್ಯವಾಗದೆ ಇಂತಹ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂಎಂ ಪರಮೇಶ್ ಜಂಟಿ ಪತ್ರೀಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ….

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…

Read More