Headlines

ನರಿಯನ್ನು ಭೇಟೆಯಾಡಿದ ಭಾರಿ ಗಾತ್ರದ ಹೆಬ್ಬಾವು|python

ನರಿಯನ್ನು ಹಿಡಿದ ಹೆಬ್ಬಾವು…!  ಸಾಗರ: ಹೆಬ್ಬಾವೊಂದು ನರಿಯನ್ನು ಹಿಡಿದ ಘಟನೆ ಐ. ಟಿ. ಐ ಕಾಲೇಜ್ ಹತ್ತಿರ ನಡೆದಿದ್ದು, ಹೆಬ್ಬಾವು ನರಿಯನ್ನು ಹಿಡಿದಿರುವ ದೃಶ್ಯ ವೈರಲಾಗಿದೆ. ತಾಲೂಕಿನ ರಾಮನಗರದ ಸಮೀಪದ ಐ. ಟಿ. ಐ ಕಾಲೇಜ್ ಸಮೀಪ ಹೆಬ್ಬಾವು ನರಿಯನ್ನು ಹಿಡಿದು ತನ್ನ ದೇಹದಿಂದ ಸುತ್ತಿಕೊಂಡು ಸಾಯಿಸಿದೆ. ಇದನ್ನು ಸ್ಥಳೀಯರು ನೋಡಿ ಸ್ನೇಕ್ ಅನುಪ ಅವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಅರಣ್ಯ ಅಧಿಕಾರಿಗಳ ಜೊತೆಗೆ ಆಗಮಿಸಿ ಹೆಬ್ಬಾವಿನ ರಕ್ಷಣೆ ಮಾಡಿದ್ದಾರೆ. ನಂತರ ಹೆಬ್ಬಾವನ್ನು ಕಾಡಿಗೆ ಬಿಡುವುದಾಗಿ ತಿಳಿಸಿದ್ದಾರೆ.

Read More

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 144 ಸೆಕ್ಷನ್ ಜಾರಿ ಶಿವಮೊಗ್ಗ ನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದು, ಇನ್ನೊಂದೆಡೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಥಳದಲ್ಲೀಗ 144 ಸೆಕ್ಷನ್ ವಿಧಿಸಲಾಗಿದೆ.  ನಡೆದಿದ್ದೇನು?  ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಇದರ ಬೆನ್ನಲ್ಲೆ ಪೊಲೀಸರು ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ರಿಪ್ಪನ್‌ಪೇಟೆ – ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಹೃದಯಾಘಾತದಿಂದ ನಿಧನ|RPET

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿನ ಭಗತ್ ಸಿಂಗ್ ನಗರದ ನಿವಾಸಿ ಕನ್ನಡ ಪರ ಹೋರಾಟಗಾರ ಸಮಾಜ ಸೇವಕ ಹಾಗೂ ಪುನೀತ್ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಶೆಟ್ಟಿ (26) ಇಂದು ಬೆಳಗಿನಜಾವ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗಿನಜಾವ ವಿನಾಯಕ್ ಶೆಟ್ಟಿ ರವರಿಗೆ (ಭಾನುವಾರ) ಎದೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತ ವಿನಾಯಕ್ ಶೆಟ್ಟಿ ತಂದೆ, ತಾಯಿ, ಓರ್ವ ಸಹೋದರಿ, ಓರ್ವ ಸಹೋದರ ಸೇರಿದಂತೆ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು|GKb

ಶಾಸಕ ಬೇಳೂರು ಗೋಪಾಲಕೃಷ್ಣ ಪ್ಲೆಕ್ಸ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ದೇವಸ್ಥಾನದ ಬಳಿ ಜಾತ್ರಾ ಮಹೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ  ಪ್ಲೆಕ್ಸ್ ನ್ನು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ನಡೆದಿದ್ದೇನು..??? ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಆರಂಭವಾಗಿದ್ದು ಆ ಹಿನ್ನಲೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಶುಭಾಶಯ ಕೋರಿ ಹಾಕಿದ್ದ ಪ್ಲೆಕ್ಸ್ ನ್ನು…

Read More

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ|rpet

ರಿಪ್ಪನ್‌ಪೇಟೆ : ಪತ್ನಿಯ ಸಾವಿನಿಂದ ನೊಂದು ಬಾವಿಗೆ ಹಾರಿ ಆತ್ಮಹತ್ಯೆ ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ. ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು|theft

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು ತೀರ್ಥಹಳ್ಳಿ : ಇಲ್ಲಿನ ವಾಟೆ ಮನೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ ಮೂವರ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ವಾಟೆಮನೆ ಬಸ್ ನಿಲ್ದಾಣದ ಸಮೀಪದ ಮುಳುಬಾಗಿಲು ವ್ಯಾಪ್ತಿಗೆ ಒಳಪಡುವ ವಾಟೆಮನೆ ದೇವಸ್ಥಾನದಲ್ಲಿ ಬೆಲೆಬಾಳುವ ಗಂಟೆ, ದೀಪ, ಕಾಣಿಕೆ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲು ಮೂವರು ಹೊಂಚು ಹಾಕಿದ್ದರು. ಸ್ಥಳೀಯರು ಅವರನ್ನು ಗಮನಿಸಿ ವಿಚಾರಿಸುವ ವೇಳೆ ಇಬ್ಬರು ಕಳ್ಳರು ಸಿಕ್ಕಿ ಹಾಕಿಕೊಂಡಿದ್ದರು….

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More
Exit mobile version