ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp
ರಿಪ್ಪನ್ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…


