Headlines

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More

ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ.  ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ‌. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ.  ಅತ್ತೆ…

Read More

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ –  ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ …

Read More

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read More

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ

ಮುಖ್ಯ ಶಿಕ್ಷಕರ ವರ್ಗಾಯಿಸಲು ಒತ್ತಾಯಿಸಿ ಶಾಲೆಗೆ ಬೀಗ ಜಡಿದು ಪೋಷಕರ ಪ್ರತಿಭಟನೆ – BEO ಮಧ್ಯ ಪ್ರವೇಶದಿಂದ ಪ್ರತಿಭಟನೆ ಅಂತ್ಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ನಡೆಸುತಿದ್ದ ಪ್ರತಿಭಟನೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ  ಕಳೆದ ಆರು ತಿಂಗಳಿಂದ  ಶಾಲೆಗೆ ಗೈರು ಹಾಜರಾಗಿ…

Read More

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More
Exit mobile version