ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news
ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….