Headlines

ರಿಪ್ಪನ್‌ಪೇಟೆ : ತೋಟದಲ್ಲಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ದೆ ಸಾವು|snake bite

ಮನೆ ಹಿಂಬಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಸಮೀಪದ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ (72 )ಹಾವು ಕಡಿತದಿಂದ ಮೃತಪಟ್ಟ ಮಹಿಳೆಯಾಗಿದ್ದು, ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ. ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ…

Read More

ರಿಪ್ಪನ್‌ಪೇಟೆ: ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಅಪಘಾತ – ಗಾಯಾಳು ಮೆಗ್ಗಾನ್ ದಾಖಲು | ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸ್ಪಂದಿಸಿದ ಅರಣ್ಯ ಇಲಾಖೆ|Accident

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಟ್ಟಣದ ಸಮೀಪದ ವರಾನಹೊಂಡದ ಮುಖ್ಯರಸ್ತೆಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಮೂಗೂಡ್ತಿ ಕಡೆಗೆ ತೆರಳುತಿದ್ದ ಹೀರೋ ಹೊಂಡ ಸ್ಪ್ಲೆಂಡರ್ ಬೈಕ್ ಗೆ ನರಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ್(50) ರವರಿಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…

Read More

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿ|NSS

ವಿದ್ಯಾರ್ಥಿಗಳಲ್ಲಿ  ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಸಹಕಾರಿ ರಿಪ್ಪನ್‌ಪೇಟೆ;-ವಿದ್ಯಾರ್ಥಿ ಜೀವನ ಅತ್ಯುತ್ತಮವಾಗಿದ್ದು ತಮ್ಮ ವ್ಯಾಸಂಗದ ಜೊತೆ ಗ್ರಾಮದಲ್ಲಿನ ಸ್ವಚ್ಚತೆ ಹಾಗೂ ಪರಿಸರ ರಕ್ಷಣೆಯೊಂದಿಗೆ ಗ್ರಾಮೀಣ ಭಾಗದ ಮೂಲಭುತ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ಸೇವಾ ಶಿಬಿರಗಳು ಪೂರಕವಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಸಮೀಪದ ಕಲ್ಲುಹಳ್ಳ ಮಲೆನಾಡು ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಅವರಣದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ವತಿಯಿಂದ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷೀಕ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More

ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್​ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್​ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.  ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು  ನಿನ್ನೆ ದಿನಾಂಕಃ…

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP

ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…

Read More