Headlines

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…

Read More

ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆ‍ಚರಣೆ|Bakrid

ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್‌ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister

“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್‌ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ  ಸ್ವಾಗತಿಸುವ ಮೂಲಕ ಬರಮಾಡಿಕೊಂಡರು. ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike

ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು ₹80ಕ್ಕೆ ಹೆಚ್ಚಳಗೊಂಡಿದೆ. ಅದರ ಬೆನ್ನಲ್ಲೇ ಬೀನ್ಸ್ ಕೆ.ಜಿಗೆ ₹100, ಕ್ಯಾರೆಟ್ ₹80, ಬದನೆ ₹60, ಮೂಲಂಗಿ ₹40, ಹೂಕೋಸು ₹40, ಆಲೂಗಡ್ಡೆ ₹25, ಬಟಾಣಿಯ ಬೆಲೆಯೂ (₹80) ಒಂದೂವರೆ ಪಟ್ಟು ಹೆಚ್ಚಾಗಿದೆ. ಸೊಪ್ಪಿನ ಬೆಲೆಯೂ ಗಗನಕ್ಕೇರಿದೆ. ಕೊತ್ತಂಬರಿ ಕಟ್ಟಿಗೆ ₹ 10, ಸಬ್ಬಸಿಗೆ, ಎಳೆಹರಿವೆ, ದಂಟಿನ ಸೊಪ್ಪು, ಮೆಂತೆ…

Read More

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More
Exit mobile version