Headlines

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read More

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More
Exit mobile version