Headlines

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More
Exit mobile version