ಪೋಕ್ಸೋ ಕೇಸ್ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ.
2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.
ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ತನಿಖಾಧಿಕಾರಿಗಳಾದ ರಾಘವೇಂದ್ರ ಖಾಂಡಿಕೆ, ಸಿಪಿಐ ಭದ್ರಾವತಿ ನಗರ ವೃತ್ತ ರವರು ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು..
ಪ್ರಕರಣ The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರುಗಳಾದ ಹರಿಪ್ರಸಾದ್ ಮತ್ತು ಶ್ರೀಧರ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಈ ಸಂಬಂಧ ಇದೀಗ ಆರೋಪ ದೃಢಪಟ್ಟು ತೀರ್ಪು ಹೊರಬಿದ್ದಿದ್ದು ನ್ಯಾಯಾಧೀಶರಾದ ಮೋಹನ್ ಜೆ.ಎಸ್. ರವರು ದಿನಾಂಕ: 11-01-2024 ರಂದು ಆರೋಪಿತನಿಗೆ ಶಿಕ್ಷೆ ವಿಧಿಸಿದ್ದಾರೆ..
20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,10,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 06 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು ಹಾಗೂ ನೊಂದ ಬಾಲಕಿಗೆ ದಂಡದ ಮೊತ್ತದಲ್ಲಿ 1,00,000/- ರೂ ಗಳನ್ನು ಮತ್ತು ಪರಿಹಾರವಾಗಿ 3,00,000/- ರೂಗಳನ್ನು ನೀಡಲು ಆದೇಶ ನೀಡಿರುತ್ತಾರೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್