ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು 


ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು.

ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. 

ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ನಲ್ಲಿ ಪವನ್ ಮತ್ತು ಪ್ರಜ್ವಲ್ ನನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪ್ರಜ್ವಲ್ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ನೇಹಿತ ಪವನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ. ತುಂಗನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *