ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ | Crime News

ಮದುವೆಯಾಗಿ ಒಂದು ತಿಂಗಳಲ್ಲೇ ಡ್ರೈವರ್ ಜತೆ ಓಡಿಹೋದ ಹೆಂಡತಿ – ಪತ್ನಿ ಹಾಗೂ ಪ್ರಿಯಕರನನ್ನು ಕೊಲೆಗೈದ ಪತಿರಾಯ


ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ.

ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ.

ತೌಫಿಕ್ ಹಾಗೂ ಹೀನಾ ಕೌಸರ್‌ಳಿಗೆ ಕಳೆದ 4 ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ ಕೇವಲ 1 ತಿಂಗಳಿಗೆ ಹೆಂಡತಿ ಹೀನಾ ಕೌಸರ್ ಆಕೆಯ ಹಳೆ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಇದಾದ ಬಳಿಕ ಪುನಃ ಅವರನ್ನು ಮನೆಯವರು ಹುಡುಕಿ ಸಮಾಜದ ಮುಖಂಡರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದರು. ಈ ವೇಳೆ ತಾನು ತೌಫಿಕ್‌ ಜೊತೆಗೆ ಸಂಸಾರ ಮಾಡುವುದಕ್ಕೆ ಇಷ್ಟವಿಲ್ಲ, ಯಾಸೀನ್‌ನೇ ಬೇಕು ಎಂದು ಹೀನಾ ಹಠ ಮಾಡಿದ್ದಾಳೆ. ಆಗ ಗ್ರಾಮಸ್ಥರೆಲ್ಲರೂ ಸೇರಿ ತೌಫಿಕ್‌ ಜೊತೆಗಿನ ವಿವಾಹವನ್ನು ಮುರಿದು ಯಾಸಿನ್ ಬಾಗೊಡೆ ಜೊತೆಗೆ ಹಿರಿಯರೆಲ್ಲರು ಸೇರಿ ಮದುವೆ ಮಾಡಿಸಿದ್ದರು.

ಜೀವನದಲ್ಲಿ ಹೇಗೆಲ್ಲಾ ಇರಬೇಕು ಎಂದು ಕನಸು ಕಟ್ಟಿಕೊಂಡು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಮದುವೆಯಾದ ಹೆಂಡತಿ ಕೇವಲ ಒಂದು ತಿಂಗಳಿಗೆ ಬೇರೊಬ್ಬನ ಜೊತೆಗೆ ಮದುವೆಯಾಗಿ ಸಂಸಾರ ಮಾಡುತ್ತಿದ್ದಾಳೆ. ಇದನ್ನು ಕಂಡು ಸಹಿಸಿಕೊಳ್ಳಲಾಗದ ತೌಫಿಕ್‌ ತನ್ನ ಮಾಜಿ ಪತ್ನಿ ಹಾಗೂ ಆಕೆಯ ಹಾಲಿ ಗಂಡನನ್ನು ಹುಡುಕಿ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಇನ್ನು ಇಬ್ಬರನ್ನು ಕೊಲೆ ಮಾಡಿದ ಬಳಿಕ ತಾನು ನೇರವಾಗಿ ಪೊಲೀಸ್ ಠಾಣೆಗೆ ಹೋಗುವುದಾಗಿ ಹೇಳಿದ ತೌಫಿಕ್ ಅಲ್ಲಿಂದ ಪರಾರಿ ಆಗಿದ್ದಾನೆ.

ಡಬಲ್ ಮರ್ಡರ್ ನಡೆದ ಸ್ಥಳಕ್ಕೆ ಐಗಳಿ ಠಾಣೆ ಪೊಲೀಸರು ಬಂದು ಪರಿಶೀಲನೆ ಮಾಡಿದ್ದಾರೆ. ಆರೋಪಿ ತೌಫಿಕ್‌ನ ಪತ್ತೆಗಾಗಿ ಪೊಲೀಸರು ಎರಡೂ ತಂಡಗಳಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

1 hour ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

2 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

6 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

10 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

13 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago