ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನೂ ಕಳೆದುಕೊಂಡಿರುವ ಸಂತ್ರಸ್ತರು ಸಾಗರ, ಹೊಸನಗರ ಭಾಗದಲ್ಲಿದ್ದಾರೆ. ಅವರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದರು.
‘ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾಪವಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಕುಡಿಯುವ ನೀರು ಕೊಡಲು ಆಗುವುದಿಲ್ಲ ಎಂದು ಹೇಳಲು ಬರುವುದಿಲ್ಲ. ಆದರೆ ಶರಾವತಿ ನದಿ ನೀರನ್ನು ಪುಕ್ಕಟ್ಟೆಯಾಗಿ ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಿದರೆ ನೀರು ಹರಿಸುವ ಬಗ್ಗೆ ಯೋಚಿಸಲಾಗುತ್ತದೆ’ ಎಂದು ಹೇಳಿದರು.
ಈಗಾಗಲೆ ಕುಡಿಯುವ ನೀರಿನ ಸಮಸ್ಯೆ ಎಲ್ಲ ಕಡೆಗಳಲ್ಲಿಯೂ ಇದೆ. ಶರಾವತಿ ನದಿನೀರು ವಿದ್ಯುತ್ ಯೋಜನೆಗೆ ಮಾತ್ರ ಉಪಯೋಗಿಸಿಕೊಳ್ಳಲಾಗುತ್ತಿದ್ದು, ಕೃಷಿ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುತ್ತಿಲ್ಲ. ನಮ್ಮ ಭಾಗದಲ್ಲಿ ಕುಡಿಯುವ ನೀರಿಗೆ ಶರಾವತಿ ವರದಾತೆಯಾಗಿದ್ದಾಳೆ. ಏಕಾಏಕಿ ನದಿನೀರು ಒಯ್ಯುತ್ತೇವೆ ಎಂದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಹಾಗೆಂದು ಕುಡಿಯುವ ನೀರು ಕೊಡುವುದಿಲ್ಲ ಎಂದು ಹೇಳಲು ಸಹ ಬರುವುದಿಲ್ಲ’ ಎಂದು ತಿಳಿಸಿದರು.
ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಅಗಲೀಕರಣ ಸಂದರ್ಭದಲ್ಲಿ ಕೆಲವು ಕಡೆಗಳಲ್ಲಿ ಜಾಗದ ಅಗತ್ಯ ಇದ್ದು, ಅವರಿಗೆ ಜಾಗ ಬಿಟ್ಟು ಕೊಡುವಂತೆ ಮನವೊಲಿಸಲಾಗುತ್ತದೆ. ಜಾಗ ಬಿಟ್ಟುಕೊಟ್ಟವರಿಗೆ ಸೂಕ್ತ ಪರಿಹಾರ ನಗರಸಭೆಯಿಂದ ಕೊಡಲಾಗುತ್ತದೆ. ರಸ್ತೆ ಇಕ್ಕೆಲಗಳಲ್ಲಿ ಅನಗತ್ಯ ಮಳಿಗೆ ಹಾಕಲು ಅವಕಾಶ ಕೊಡುವುದಿಲ್ಲ. ನಗರಸಭೆಯಿಂದ ಫುಡ್ ಕೋರ್ಟ್ ನಿರ್ಮಿಸಲಾಗುತ್ತದೆ. ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡುತ್ತಿದ್ದು, ಫುಡ್ ಕೋರ್ಟ್ ಸೇರಿದಂತೆ ಅಗತ್ಯ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್