ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ
ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 71.45 ಲಕ್ಷ ರೂ. ನಷ್ಟವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಕಾರ್ಯಪಾಲಕ ಇಂಜಿನಿಯರ್ ವರದಿ ಸಲ್ಲಿಸಿದ್ದರು.
ವರದಿ ಆಧಾರದ ಮೇಲೆ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ‘ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011’ರ ಕಲಂ 09ರ ಅಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಸಂಬಂಧ ನವೆಂಬರ್ 24ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತಿ ಸಿಇಒಗೆ ನಿರ್ದೇಶಿಸಲಾಗಿತ್ತು. ಆದರೆ, ಅವರು ಇದೂವರೆಗೂ ವರದಿ ಸಲ್ಲಿಸಿಲ್ಲ.
ಹೀಗಾಗಿ, ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 16 ರಂದು ಅವರು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು. ತಪ್ಪದೆ ವರದಿ ಸಲ್ಲಿಸಬೇಕು. ಅಲ್ಲದೆ, 25,000 ರೂ. ದಂಡ ಕಟ್ಟಿ, ಮುಚ್ಚಳಿಕೆ ಬರೆದುಕೊಟ್ಟರೆ ಅವರನ್ನು ಬಿಡುಗಡೆ ಮಾಡಬಹುದು ಎಂದು ಆದೇಶದಲ್ಲಿ ಹೇಳಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್