ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ
ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ಶಿವಮೊಗ್ಗ(shivamogga)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಅಧಿಕಾರಿಗಳ ಸಭೆ ನಡೆಸಿ ವಿಕಸಿತ ಯಾತ್ರೆಗೆ ಹೋದರೆ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಗೆ ಹೋಗದಂತೆ ಅಧಿಕಾರಿಗಳನ್ನು ತಡೆದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸುತ್ತೇವೆಂದು ಪ್ರಮಾಣ ಮಾಡಿರುತ್ತಾರೆ. ಕೂಡಲೇ ಮುಖ್ಯಮಂತ್ರಿಗಳು ಮಧು ಬಂಗಾರಪ್ಪನವರನ್ನು ವಜಾಗೊಳಿಸಬೇಕು. ಮಧು ಬಂಗಾರಪ್ಪ ಮಾತಾಡಿರೋದು ಸರಿ ಅಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದರು.
ಬಡವರ ಕಾರ್ಯಕ್ರಮ ಜಾರಿಗೊಳಿಸುವುದನ್ನ ಇವರು ವಿರೋಧ ಮಾಡುತ್ತಿದ್ದಾರೆ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತೇವೆ. ಮಧು ಬಂಗಾರಪ್ಪ ಮಂತ್ರಿಯಾದ ಕೂಡಲೇ ಗಣರಾಜ್ಯ ಆಗಲು ಸಾಧ್ಯವಿಲ್ಲ ಎಂದರು.
ವಿಕಸಿತ ಭಾರತ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲಾ ಗ್ರಾಮ ಪಂಚಾಯತಿಯಲ್ಲೂ ನಾವು ತಲುಪಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ಬಗ್ಗೆ ಈ ಯಾತ್ರೆ. ಕೇಂದ್ರ ಸರ್ಕಾರದ ಯೋಜನೆಗಳು ಸಿಗದೆ ಹೋದರೆ ಸ್ಥಳದಲ್ಲೇ ಪರಿಹಾರ ನೀಡುವ ಯಾತ್ರೆಯಿದು ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್