ತೀರ್ಥಹಳ್ಳಿ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ 16ನೇ ಮೈಲಿಕಲ್ಲಿನ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಈ ಘಟನೆ ನಡೆದಿದೆ.
ಬೈಕ್ನಲ್ಲಿದ್ದವರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದರು. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿಗೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಗೆ (ಸಹ್ಯಾದ್ರಿ) ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ಇನ್ನೂ ಅಪಘಾತಕ್ಕೊಳಗಾದ ಬೈಕ್ ನಂಬರ್ ದಾವಣಗೆರೆ ರಿಜಿಸ್ಟ್ರೇಷನ್ ತೋರಿಸುತ್ತಿದ್ದು (KA 17 EC 2519) ಗಾಡಿಯ ಹಿಂಬದಿಯಲ್ಲಿ ದೊಡ್ಮನೆ ಎಂದು ಬರೆಯಲಾಗಿದೆ.
ಹಿಟ್ ಅಂಡ್ ರನ್ ಗೆ ಮಹಿಳೆ ಬಲಿ
ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪದ ಹಿರೇಸರದ ಬಳಿ ಹಿಟ್ ಅಂಡ್ ರನ್ಗೆ ಮಹಿಳೆ ಬಲಿಯಾದ ಘಟನೆ ಇಂದು ಸಂಜೆ ನಡೆದಿದೆ.
ಮೃತರನ್ನು ತೀರ್ಥಹಳ್ಳಿ ತಾಲ್ಲೂಕಿನ ತನಿಕಲ್ ಗ್ರಾಮದ ಸ್ವಾಮಿ ಎಂಬುವವರ ಪತ್ನಿ ಶುಭ (47) ಮೃತ ಮಹಿಳೆ.
ತೀರ್ಥಹಳ್ಳಿಯಿಂದ ಕೋಣಂದೂರಿಗೆ ಪತಿಯೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಹಾವೇರಿ ಮೂಲದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಶುಭ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿ ಚಲಾಯಿಸುತ್ತಿದ್ದ ಮೃತರ ಪತಿ ಸ್ವಾಮಿ ಎಂಬುವವರಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಹಾವೇರಿ ಮೂಲದ ವ್ಯಕ್ತಿ ಸ್ವಿಫ್ಟ್ ಕಾರಲ್ಲಿ ಅಪಘಾತ ಮಾಡಿ ಪರಾರಿಯಾಗಿದ್ದ ವೇಳೆ ಕವಲೇದುರ್ಗದ ಬಳಿ ಆತನನ್ನ ಸ್ಥಳೀಯರು ಹಿಡಿದಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…