Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು


ರಿಪ್ಪನ್‌ಪೇಟೆ : ಶ್ರೇಷ್ಠವಾದದನ್ನು ಸಾಧಿಸುವ ತುಡಿತ ಇರಬೇಕು ಜೊತೆಗೆ ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು ಎಂದು ಎಂದು ಮಳಲಿ ಮಠದ ಡಾ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು.

ಇಲ್ಲಿನ ಸಮೀಪದ ಹೆದ್ದಾರಿಪುರ ಸಾವಿತ್ರಮ್ಮ ಶ್ರೀ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರತಿಯೊಬ್ಬರಲ್ಲಿ ಒಂದು ಗುರಿ ಒಬ್ಬ ಗುರು ಇರಬೇಕು ಅದರ ಜೊತೆಯಲ್ಲಿ ಸಮರ್ಥ ಸಾಧನೆಯನ್ನು ಮಾಡಲು ಸ್ಥಿರವಾದ ಶುದ್ಧವಾದ ಮನಸ್ಸಿರಬೇಕು ಎಂದು ನುಡಿದರು.

ಜೀವನದಲ್ಲಿ ಸೋಲು ಗೆಲುವು ಸಹಜ ಸೋಲಾದಾಗ ಕುಗ್ಗದೆ ಗೆಲುವು ಹೊಂದಿದಾಗ ಹಿಗ್ಗದೆ ಸೋಲು ಗೆಲುವನ್ನು ಸಮಾನವಾಗಿ ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನದಲ್ಲಿ ಉತ್ತಮವಾದ ಗುರಿಯನ್ನು ಸಾಧಿಸಲು ಸಾಧ್ಯ ಹಾಗಾಗಿ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ಕೊಡುವಲ್ಲಿ ಪೋಷಕರ ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯವೆಂದು ತಿಳಿಸಿದರು.

ಸ್ವಾಮಿ ವಿವೇಕಾನಂದರವರು ಏಳಿರಿ, ಎದ್ದೇಳಿರಿ,ಎಚ್ಚರರಾಗಿರಿ, ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಸ್ವಾಮಿ ವಿವೇಕಾನಂದರ ಮಾತನ್ನು ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ಸಾಗಿಸಿದರೆ ಜೀವನ ಪಾವನವೆಂದು ತಿಳಿ ಹೇಳಿದರು.

ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಮಾತನಾಡಿ ಮನಷ್ಯನ ಜೀವನದಲ್ಲಿ ಶಿಕ್ಷಣ ಬಹಳ ಮುಖ್ಯವಾದ ಘಟ್ಟ. ಯಾವ ದೇಶ ಶಿಕ್ಷಣಕ್ಕೆ ಮಹತ್ವವನ್ನು ನೀಡುವುದಿಲ್ಲವೋ ಅಲ್ಲಿ  ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಶಿಕ್ಷಣದಲ್ಲಿ ಗುಣಮಟ್ಟ, ಜೀವನಮೌಲ್ಯ, ಸಮಾಜಮುಖಿ ಶಿಕ್ಷಣ ಅಗತ್ಯವಿದ್ದು ಪೋಷಕರು ಮಕ್ಕಳಿಗೆ ಇದರತ್ತ ಚಿತ್ತ ಹರಿಸಲು ಹೆಚ್ಚು ಆಸಕ್ತಿವಹಿಸಬೇಕು. ಶಿಕ್ಷಕರು ಪಠ್ಯಕ್ರಮಕ್ಕೆ ಜ್ಞಾನವನ್ನು ಸೀಮಿತಗೊಳಿಸಿಕೊಳ್ಳದೆ ಪಠ್ಯದಲ್ಲಿನ ಮೂಲ ಉದ್ದೇಶದ ಅಧ್ಯಯನ ಅಗತ್ಯವಾಗಿದೆ. ಮಕ್ಕಳಿಗೆ ಚೆನ್ನಾಗಿ ಕಲಿಸಬೇಕೆಂಬ ಅಂತಸತ್ವವಿರಬೇಕು. ಶಿಕ್ಷಣದ ತಿರುಳು ಅರಿಯದವರು ಮಕ್ಕಳಿಗೆ ಪಾಠಮಾಡುವ ವ್ಯವಸ್ಥೆ ಆಗಬಾರದು. ತಮ್ಮ ವೃತ್ತಿಯಲ್ಲಿ ಸಮಯ ಪಾಲನೆಯೊಂದಿಗೆ, ವಿಚಾರಗಳ ಅಧ್ಯಯನ ಆಗಬೇಕು. ಜ್ಞಾನವೆಂಬುದು ಆಕಾಶದಿಂದ ಬಂದು ತಲೆಗೆ ಬೀಳುವುದಿಲ್ಲ. ನಾವೇ ಕಲಿತುಕೊಂಡು ಜೀವನದಲ್ಲಿ ಶಿಸ್ತು,ಸಂಯಮ ವನ್ನು ಅಳವಡಿಸಿಕೊಳ್ಳಬೇಕು ಎಂದರು.


ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕ ಶಿವರಾಮ್, ವಾಸಪ್ಪಗೌಡ, ನಾಗರಾಜ ಹೆಚ್.ಕೆ, ಜಿ ಆರ್ ಗೋಪಾಲಕೃಷ್ಣ, ಪೋಷಕರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago