ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ
ರಿಪ್ಪನ್ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.
ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು ವೈದ್ಯರುಗಳ ಸಾಲಿನಲ್ಲಿ ಹೊಸನಗರ ಪಟ್ಟಣದ ಶ್ರೀ ಪ್ರಭು ಕ್ಲಿನಿಕ್ನ ಡಾ.ಗುರುರಾಜ ರವರು ಒಬ್ಬರು ತಮ್ಮ ಕರ್ತವ್ಯದ ದಿನಗಳಲ್ಲಿ ಚಾಚು ತಪ್ಪದೆ ಕಾಯಕ ನಿಷ್ಟೆಯನ್ನು ಪ್ರಾಮಾಣಿಕವಾಗಿ ಪಾಲಿಸಿದವರು.ಕವಿ ಸಾಹಿತ್ಯ ಸಮಾಜಿಕ ಧಾರ್ಮಿಕ ನೆಲ ಜಲ ಭಾಷೆಗಳ ವಿಚಾರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಹಲವು ಸಂದರ್ಭಗಳಲ್ಲಿ ಉದಾರ ದೇಣಿಗೆ ನೀಡುವುದರೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಸರಳ ವ್ಯಕ್ತಿತ್ವದ ವೈದ್ಯ ಡಾ.ಗುರುರಾಜರವರ ಸೇವಾ ಕಾರ್ಯವನ್ನು ಗುರುತಿಸಿ ಕೋಣಂದೂರು ಶಿವಲಿಂಗೇಶ್ವರ ಪ್ರಶಸ್ತಿಗೆ ಆಯ್ಕೆಮಾಡಿರುವುದು ಸಮಯೋಚಿತವಾಗಿದೆ ಎಂದು ಹೇಳಿದರು.
ಇದೇ ಜನವರಿ 14 ರಂದು ಏರ್ಪಡಿಸಲಾಗಿರುವ ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವದಲ್ಲಿ ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜೀ ಪ್ರಶಸ್ತಿ ಪ್ರಧಾನ ಮಾಡುವರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್