Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ


ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ ನಾಯಕರು  ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಇಲ್ಲಿ ನಡೆದ ನಡೆದ ಗಲಾಟೆಯ ಬಗ್ಗೆ ಸ್ಥಳೀಯವಾಗಿ ವಿಚಾರಿಸಿ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಅದನ್ನು ಹೊರತು ಪಡಿಸಿ ಏಕಾಏಕಿ ಕಾಂಗ್ರೆಸ್ ಪಕ್ಷದ ವಿರುದ್ದ ಪ್ರತಿಭಟನೆ ಮಾಡುವುದು ಸರಿಯಲ್ಲ ಮಾಜಿ ಶಾಸಕ ರು,ಹಿರಿಯರು ಆದ ಸ್ವಾಮಿರಾವ್  ಹೆಸರಿಗೆ ಗೌರವ ತರುವ ಕೆಲಸ ಸುರೇಶ್ ಸ್ವಾಮಿ ರಾವ್ ಮಾಡಬೇಕು. ನಗರ ಸುತ್ತ ಮುತ್ತಲು ಹಲವಾರು ಪ್ರದೇಶದಲ್ಲಿ ನಿಧಿ ಶೋದನೆ ಮಾಡಲಾಗಿದೆ.ಇದರಲ್ಲಿ ಸುರೇಶ್ ಸ್ವಾಮಿರಾವ್ ನೇರ ಕೈವಾಡವಿದೆ ಈ ಬಗ್ಗೆ ತನಿಖೆ ನಡೆಯಲಿ, ಕಳೆದ ಬಾರಿ ಸುಡೂರು ರೇಲ್ವೆ ಗೇಟೆ ಬಳಿ ಕುಡಿದು ದಾಂದಲೆ ಮಾಡಿ ಜಿಪಂ ಸದಸ್ಯ ಸ್ಥಾನಕ್ಕೆ ಅಗೌರವ ತಂದಿರುವುದನ್ನು ಜನತೆ ನೋಡಿದ್ದಾರೆ.ಇಂತಹವರಿಂದ ಪಾಠ ಕೇಳುವ ಪರಿಸ್ಥಿತಿ ನಗರ ಹೋಬಳಿ ಜನತೆಗೆ ಬಂದಿಲ್ಲ ಎಂದರು.


ಕಾಂಗ್ರೆಸ್ ಮುಖಂಡ ಕರುಣಕರ್ ಶೆಟ್ಟಿ ಮಾತನಾಡಿ ಯುವಮೋರ್ಚಾ ಅಧ್ಯಕ್ಷ ನಿತಿನ್ ಗೆ ಹಿಂದುತ್ವದ ಹೆಸರಿನಲ್ಲಿ ,ಗೋ ರಕ್ಷಣೆ ಹೆಸರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ವಾಹನ ತಡೆದು ತಪಾಸಣೆ ನಡೆಸಲು ಹಕ್ಕು ಕೊಟ್ಟವರು ಯಾರು,ಕೃಷಿ  ಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರು ಯಾರು,ತಮ್ಮ ವಾಹನಕ್ಕೆ ಸೈಡ್ ನೀಡಿಲ್ಲ ಎಂದು ಕೆ ಎಸ್ ಆರ್ ಟಿ ಬಸ್ ಚಾಲಕನ ಮೇಲೆ ಚಿಕ್ಕಪೇಟೆ ಸರ್ಕಲ್ ನಲ್ಲಿ ಹಲ್ಲೆ ನಡೆಸಿದ ನಿತಿನ್ ಮತ್ತು ಅವನ ತಮ್ಮ ನವೀನ್ ಕುರಿತು ಸ್ಥಳಿಯವಾಗಿ ವಿಚಾರಿಸ ಬೇಕು ಸತ್ಯಸತ್ಯತೆ ತಿಳಿದು ಮಾತನಾಡುವ ನೈತಿಕತೆ  ಬಿಜೆಪಿ ನಾಯಕರು ಅರಿತು ಕೊಳ್ಳಬೇಕು  ಯಾವೂದೋ ಕುಲಕ್ಷ ಕಾರಣಕ್ಕೆ  ಡಿಸೆಂಬರ್ ರಾತ್ರಿ ಒಂದೂವರೆ ಎರಡು ಗಂಟೆ ಸಮಯದಲ್ಲಿ ಜಗಳವಾಡಿಕೊಂಡ ಯುವಕರನ್ನು ಬುದ್ದಿ ಹೇಳಿ ಸರಿಪಡಿಸುವುದನ್ನು ಬಿಟ್ಟು ರಾಜಕೀಯ ಬಣ್ಣ ಕಟ್ಟಬಾರದು ಇದು ಬಿಜೆಪಿ ನಾಯಕರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ, ಎರಡು ಕಡೆಯ ವ್ಯಕ್ತಿಗಳ ಮೇಲೆ ಕೇಸ್ ದಾಖಲಿಸಿ ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಯುವ ಮುಖಂಡ ಗೋಪಾಲ ಶೆಟ್ಟಿ ಮಾತನಾಡಿ ಚಿಕ್ಕಪೇಟೆ ಗಣಪತಿ ವಿಸರ್ಜನೆಯ ವೇಳೆ ದೊಣ್ಣೆಗಳೊಂದಿಗೆ ಮೆರವಣಿಗೆ ನುಗ್ಗಿ ದಾಂದಲೆ ಎಬ್ಬಿಸಿದ್ದು ಗೂಂಡಾಗಿರಿಯಲ್ಲವೇ,  ಶಿವಮೊಗ್ಗ ರಸ್ತೆಯ  ಸುಮಾರು ರೈಲ್ವೆಗೇಟ್ ಬಳಿ ಕುಡಿದು ರೈಲ್ವೆ ಸಿಬ್ಬಂದಿಗಳಿಗೆ ಥಳಿಸಿದ್ದು ಗೊಂಡಾಗಿರಿಯಲ್ಲವೇ, ನಿಧಿ ಚೋರರನ್ನು ಜೊತೆಯಲ್ಲಿರಿಸಿಕೊಂಡು ಪ್ರತಿಭಟನೆ ನಡೆಸುವುದು ಯಾವ ಪುರುಷಾರ್ಥ ..? ಸರ್ಕಾರಿ ಆಸ್ಪತ್ರೆ ವೈಧ್ಯರನ್ನು ಉದ್ದೇಶ ಪೂರ್ವಕವಾಗಿ ವರ್ಗವಣೆ ಮಾಡಿಸಿ ನಗರ ಭಾಗದ ಜನತೆ ವೈದ್ಯರ ಸೇವೆ ವಂಚಿತರನ್ನಾಗಿ ಮಾಡಿದ್ದು ಬಿಜೆಪಿಯ ನಾಯಕರ ಸಾಧನೆ  ಎಂದು ಅಕ್ರೋಶ ವ್ಯಕ್ತ ಪಡಿಸಿದರು.

ಈ ಸಂದರ್ಬದಲ್ಲಿ ಗ್ರಾಮ ಪಂಷಾಯಿತಿ ಸದಸ್ಯ ಪವನ ,ಹಿಲ್ಕಿಂಜಿ ಕುಮಾರ್, ಆರ್ಯ ಈಡಿಗ ಸಮಾಜ ಮುಖಂಡ ಗಣಪತಿ,ಚಂದ್ರಪ್ಪ , ಸುಬಾಷ್, ಕಟ್ಟಿನಹೋಳೆ ಗೋಪಾಲ, ಕಿಶೋರ್ ವಿಠೋಬ,ರಮೇಶ್, ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕತರು ಇದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

6 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

19 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

21 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

21 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

22 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago