Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು.


ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ.ಕ್ರೀಡೆಗಳು ಸೋಲು ಗೆಲುವಿನ ಪಾಠವನ್ನು ಕಲಿಸುವುದರ ಜೊತೆಗೆ ಯುವ ಸಮುದಾಯದಲ್ಲಿ ಶಿಸ್ತಬದ್ಧ ಜೀವನವನ್ನು ರೂಪಿಸುತ್ತವೆ. ಗ್ರಾಮೀಣ ಪ್ರದೇಶದಲ್ಲಿ ಯುವಜನರು ಹೆಚ್ಚು ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗುವುದರಿಂದ ಆರೋಗ್ಯವಾಗಿ ಚಟುವಟಿಕೆಯಿಂದ ಇರಬಹುದು ಎಂದು ಹೇಳಿದರು.

ಎಲೆವನ್ ಸ್ಟಾರ್ ಕ್ರಿಕೆಟ್ ಕ್ಲಬ್ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿವೃತ್ತ ಯೋಧರಿಗೆ,ಕ್ರೀಡಾ ಸಾಧಕರಿಗೆ ,ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ.ಇಂತಹ ಉತ್ತಮ ಕಾರ್ಯಕ್ರಮವನ್ನು ಆಯೋಜಿಸಿದ ಕ್ಲಬ್ ನ ಎಲ್ಲಾರಿಗೂ ಹೃದಯಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಹೆಚ್ಚಿಸುತ್ತದೆ. ಹಾಗೆಯೇ ಇದರಿಂದ ಮನಸ್ಸಿನ ನಾಗಾಲೋಟದ ಕೌಶಲತೆ ವೃದ್ಧಿಸುತ್ತದೆ. ಅದನ್ನು ಜೀವನದ ಒಂದು ಭಾಗವೆಂದು ಪರಿಗಣಿಸುವುದರಿಂದ ಒತ್ತಡದ ಜೀವನದಿಂದ ಹೊರಬರಲು ಸಾಧ್ಯ ಎಂದರು.

ಈ ಸಂಧರ್ಭದಲ್ಲಿ ನಿವೃತ್ತ ಯೋಧರಾದ ಮುಕುಂದ ಬಿ ಎಂ , ಕುಮಾರಸ್ವಾಮಿ ಬಿ ಟಿ , ರಮೇಶ್ ಹೆಚ್ ಎನ್ ಹಾಗೂ ಕುವೆಂಪು ವಿಶ್ವವಿದ್ಯಾಲಯ ಬಿಬಿಎ ವಿಭಾಗದಲ್ಲಿ ನಾಲ್ಕನೇ ರ್ಯಾಂಕ್ ಪಡೆದ ಸಿಂಧು ಮತ್ತು ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಗಗನ್ ಗೌಡ ಪರವಾಗಿ ಅವರ ಪೋಷಕರನ್ನು ಸನ್ಮಾನಿಸಲಾಯಿತು.2023-24 ನೇ ಸಾಲಿನ SSLC ,PUC ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ,ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಇಲೆವನ್ ಸ್ಟಾರ್ ಕ್ಲಬ್ ಅಧ್ಯಕ್ಷ ಅಬ್ದುಲ್ ರವೂಫ಼್ ಮುಖ್ಯ ಅತಿಥಿಗಳಾಗಿ ಧನಲಕ್ಷ್ಮಿ ಲಕ್ಷ್ಮಿ ಗಂಗಾಧರ್, ಸುಧೀಂದ್ರ ಪೂಜಾರಿ ,ಬಿ ಪಿ ರಾಮಚಂದ್ರ , ಆಸೀಫ಼್ ಭಾಷಾಸಾಬ್ , ನಿರೂಪ , ಹಸನಬ್ಬ , ರಫ಼ಿ ರಿಪನ್ ಪೇಟೆ, ಶ್ವೇತಾ ನಿಶಾಂತ್ ಆಚಾರ್ಯ, ಎಂ ಬಿ ಲಕ್ಷ್ಮಣ್ ಗೌಡ, ಅಮೀರ್ ಹಂಜಾ, ಎಂ ಎಂ ಪರಮೇಶ್, ಮಾಸ್ತಿಕಟ್ಟೆ ಸುಬ್ರಮಣ್ಯ, ಲೇಖನ ಚಂದ್ರನಾಯಕ್, ಪ್ರವೀಣ್, ಶಬ್ಬೀರ್, ಆರ್ ಎನ್ ಮಂಜುನಾಥ್, ಮುತ್ತಲಿಫ್, ಡಾಕಪ್ಪ, ಮಾಲತೇಶ್ ಹಾಗೂ ಇನ್ನಿತರರಿದ್ದರು.

ಕಾರ್ಯಕ್ರಮವನ್ನು ರಿಜ್ವಾನ್ ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

6 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

19 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

21 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

21 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

22 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

1 day ago