Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ
ರಿಪ್ಪನ್ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು.
ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿನ ಜನತೆಗೆ ಸದುಪಯೋಗವಾಗಲೆಂದು ಸದುದ್ದೇಶದಿಂದ ದಿನದ 24 ಗಂಟೆ ಉಚಿತ ವೈದ್ಯರ ಸೇವಾ ತಪಾಸಣೆ ಯನ್ನು ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಅನುಷ್ಠಾನಗೊಳಿಸಲಾಗಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವುದರ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ನಂದಿ ಆಸ್ಪತ್ರೆಯ ಮಾಲೀಕರಾದ ಸಚಿನ್ ಗೌಡ ಹಾಗೂ ವಚನ್ ಗೌಡ ರವರು ಅವಧೂತ ಅರ್ಜುನ್ ಮಹರಾಜ್ ರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಆಸ್ಪತ್ರೆಯ ವೈದ್ಯರಾದ ಹನುಮಂತ ನಾಯ್ಕ್ , ಡಾ ಅಮಿತ್ , ಗ್ರಾಪಂ ಸದಸ್ಯರಾದ ಆಸೀಫ಼್ , ನಿರೂಪ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್