Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ
– ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಸಮ್ಮೇಳನದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರವರಿಗೆ ಕಾಯಕ ಯೋಗಿ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಗಿದೆ.
ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು ಭಾಗವಹಿಸಿದ್ದರು ಹಾಗೂ ಪುಸ್ತಕ ಲೋಕಾರ್ಪಣೆ, ರಾಜ್ಯ ಪ್ರಶಸ್ತಿ ಪ್ರದಾನ, ಕನ್ನಡ ಬುಕ್ ಆಫ್ ರೆಕಾರ್ಡ್ಸ್ ನ ವತಿಯಿಂದ ಶರಣ ಶರಣೆಯರ ಕುರಿತಾಗಿ ದಾಖಲೆ ಬರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮದಲ್ಲಿನ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರುನಾಡ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಸಮ್ಮೇಳನ ಅಧ್ಯಕ್ಷರಾದ ಅಮಜ್ಜವ ಬಾಳೇಶ ಭೋವಿ ಹಾಗೂ ಕಾರ್ಯಕ್ರಮ ದಿವ್ಯ ಸಾನಿಧ್ಯ ಪರಮ ಪೂಜ್ಯ ಶ್ರೀ ಬಸವಶಾಂತಲಿಂಗ ಸ್ವಾಮಿಜಿ , ಸಂಸ್ಥಾಪಕರಾದ ಕನಕ ಪ್ರೀತೀಶ್ , ಮಹಿಳಾ ರಾಜ್ಯಧ್ಯಕ್ಷರಾದ ರೇಖಾ ಶಿವರಾಮ್ ಭಟ್ ಹಾಗೂ ಕವಿ ಕುಸುಮಗಳು ಉಪಸ್ಥಿತರಿದ್ದರು.
ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಭಾಜನರಾದ ಯುವ ಪತ್ರಕರ್ತನಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಅಭಿನಂದನೆಗಳು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್