ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್ಎಂ ಟಿಂಬರ್ ಆಯಂಡ್ ಫರ್ನಿಚರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್ ಎಂಬಾತನನ್ನು ಬಂಧಿಸಿದ ಪೊಲೀಸರು.
ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ. ಭದ್ರಾನದಿಯ ತಟದಲ್ಲಿರುವ ತೋಟದಲ್ಲಿ ಅನಧಿಕೃತ ಕಟ್ಟಡದ ಮೇಲೆ ದಾಳಿ ನಡೆಸಿದ್ದ ಪೊಲೀಸರು. ದಾಳಿ ವೇಳೆ ಗೋದಾಮಿನ ಒಳಗೆ ಹಾಗೂ ಹೊರಗೆ ಇದ್ದ ಗೋವಿನ ಮೂಳೆಗಳು ಹಾಗೂ ಮಾಂಸದ ತುಣುಕುಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಸುಮಾರು 3ಟನ್ ತೂಕದ ಗೋವಿನ ಮೂಳೆಯ ಭಾಗವನ್ನು ಸಂಗ್ರಹಿಸಿಡಲಾಗಿತ್ತು. ಗೋಹತ್ಯೆ ನಿಷೇಧವಿದ್ದರೂ, ನಿರಂತರವಾಗಿ ಹತ್ಯೆ ಮಾಡಿ ಮೂಳೆ ಸಂಗ್ರಹಿಸಿರುವ ಶಂಕೆ. ಈ ಬಗ್ಗೆ ಹಿಂದೂಪರ ಸಂಘಟನೆ ಕಾರ್ಯಕರ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ಗೋವಿನ ಮೂಳೆ ಪತ್ತೆಯಾಗಿವೆ. ಈ ಬಗ್ಗೆ ವಿಚಾರಣೆ ಮುಂದುವರಿಸಿರುವ ಪೊಲೀಸರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್