ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ ಸ್ಪಂದನೆ ವ್ಯಕ್ತವಾಗುತ್ತಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭ್ರದ್ರಾವತಿ ತಾಲೂಕಿನ ಕೊಮ್ಮನಹಳ್ಳಿ -1, ಹೊಸನಗರ ತಾಲೂಕಿನ ತ್ರಿಣಿವೆ-1, ಬೆಳ್ಳೂರು -1, ಸಾಗರ ತಾಲೂಕಿನ ತಳವಾಟ-1 ಮಾಳ್ವೆ- 1 ಚೆನ್ನಗೊಂಡ -1, ಕುದರೂರು -1, ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ -1 , ಶಿವಮೊಗ್ಗ ತಾಲೂಕಿನ ಗಾಜನೂರು-1, ಸೊರಬ ತಾಲೂಕಿನ- ಮುದ್ದಿದೊಡ್ಡಿಕೊಪ್ಪ-1 , ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿ-1 ಆಗುಂಬೆ-1 ಹುದ್ದೆ ಖಾಲಿ ಇದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್