ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga
ಕಾಂಗ್ರೆಸ್ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ. ಸಣ್ಣತನ ತೋರುವುದು ಸರಿಯಲ್ಲ. ದೇಶಕ್ಕಾಗಿ ಅರ್ಪಣೆ ಮಾಡಿಕೊಂಡು ಬದುಕಿದ ವ್ಯಕ್ತಿಗಳಿಗೆ ಕೊಟ್ಟಾಗ ಸಣ್ಣ ಮಾತು ಆಡುವುದು ಕಾಂಗ್ರೆಸ್ನ ಕೀಳು ರಾಜಕಾರಣ ತೋರಿಸುತ್ತದೆ.
ನಾನು ತುಂಬಾ ಹತ್ತಿರದಿಂದ ಅಡ್ವಾಣಿ ಅವರನ್ನು ನೋಡಿದ್ದೇನೆ. ನಾಲ್ಕು ಭಾಗದಿಂದ ದೇಶವನ್ನು ನಿಜವಾಗಿ ಜೋಡಿಸಿದ್ದು ಅಡ್ವಾಣಿಯವರೇ. ಸೂಡೋ ಸೆಕ್ಯುಲರ್ ಎಂಬ ಹೊಸ ಪದವನ್ನು ಹುಟ್ಟು ಹಾಕಿದವರು. ಆಗ ಸೆಕ್ಯುಲರ್ ಹೆಸರಿನಲ್ಲಿ ಹಿಂದೂಗಳನ್ನು ತುಳಿಯುತ್ತಿದ್ದರು. ಒಂದು ಸಮುದಾಯವನ್ನು ತುಷ್ಟೀಕರಣ ಮಾಡುವುದು ನಡೀತಾ ಇತ್ತು. ಅದಕ್ಕೆ ಬಹಳ ದೊಡ್ಡ ಕೌಂಟರ್ ಕೊಟ್ಟಿದ್ದು ಅಡ್ವಾಣಿಯವರೇ. ಕಾಂಗ್ರೆಸ್ನವರು ಶಿವಕುಮಾರ ಸ್ವಾಮೀಜಿ ಅವರಿಗೂ ಭಾರತ ರತ್ನ ಕೊಡಬೇಕು ಅನ್ನುತ್ತಿದ್ದಾರೆ. ನಾವು ಸಹ ಮೊದಲಿನಿಂದಲೂ ಭಾರತ ರತ್ನ ಕೊಡಿ ಎಂದು ಹೇಳಿದ್ದೇವೆ. ಶಿವಕುಮಾರ ಸ್ವಾಮೀಜಿಗೂ ಭಾರತ ರತ್ನ ಕೊಡಬೇಕು. ಆದರೆ ಅಡ್ವಾಣಿ ಅವರಿಗೆ ಭಾರತ ರತ್ನ ಕೊಟ್ಟಾಗ ಪ್ರಶ್ನೆ ಮಾಡೋದು ಸರಿ ಅಲ್ಲ ಎಂದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್