ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru


ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಜೆ ಜೆ ಎಂ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಈ ಭಾಗದ ಜ್ವಲಂತ ಸಮಸ್ಯೆಯಾದ ಭೂ ಹಕ್ಕು ಸಮಸ್ಯೆಯನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಆದರೆ ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡುವುದನ್ನು ಬಿಟ್ಟು ಪರಿಸರ ಸಂರಕ್ಷಿಸಬೇಕು ಎಂದರು.


ರಾಜ್ಯ ಸರ್ಕಾರವು ಜಾತಿ, ಧರ್ಮ, ವರ್ಗ ಮೀರಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಶೋಷಿತರ, ದೀನ-ದಲಿತರ ಪರವಾಗಿ ನಿಂತಿದೆ.ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಬೆಲೆ ಏರಿಕೆಯಿಂದಾಗಿ ಜನಜೀವನ ನಡೆಸುವುದು ಕಷ್ಟಸಾಧ್ಯವಾಗಿರುವ ಈ ಕಾಲಘಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಹಕಾರಿ ಆಗಿದ್ದು, ಮುಂಬರುವ ದಿನಗಳಲ್ಲಿ ಅವರ ಜೀವನಮಟ್ಟ ಸುಧಾರಿಸಲಿದೆ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದರು. ಸರ್ಕಾರದ  ಎಲ್ಲಾ ಗ್ಯಾರೆಂಟಿ ಯೋಜನೆಗಳು ಈಗಾಗಲೇ ಅರ್ಹ ಫಲಾನುಭವಿಗಳ ಕೈ ಸೇರಿವೆ ಎಂದರು.

‘ಗ್ಯಾರಂಟಿ’ ರಾಜ್ಯ ಸರ್ಕಾರದ ಮಹತ್ವಾಂಕ್ಷೆ ಯೋಜನೆ ಆಗಿದ್ದು, ಅರ್ಹರಿಗೆ ಯೋಜನೆಯ ಫಲ ಶೀಘ್ರವಾಗಿ ತಲುಪಿಸಲು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ಸರ್ಕಾರ ರಚಿಸಿದೆ. ಈ ಎಲ್ಲಾ ಗ್ಯಾರಂಟಿ ಯೋಜನೆಗಳಿಂದ ಕುಟುಂಬ ಒಂದಕ್ಕೆ ವಾರ್ಷಿಕ ಸರಾಸರಿ ರೂ ಅರವತ್ತು ಸಾವಿರ ಹಣ ಫಲಾನುಭವಿಗಳಿಗೆ ಉಳಿತಾಯ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲತೆ ಹೆಚ್ಚುತ್ತಿದೆ. ಕುಟುಂಬ ನಿರ್ವಹಣೆ ಸುಗಮವಾಗಿದೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಸಹಕಾರಿ ಆಗಿದೆ.

ಶಕ್ತಿಯೋಜನೆಯಿಂದ ಮಹಿಳೆಯರು ರಾಜ್ಯ ವ್ಯಾಪಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ ಮೂಲಕ ಅವರ ಆತ್ಮಶಕ್ತಿ ಹೆಚ್ಚಾಗುತ್ತಿದೆ. ಉಚಿತ ವಿದ್ಯುತ್ ನೀಡಿಕೆಯು ಹಣ ಉಳಿತಾಯಕ್ಕೆ ಕಾರಣವಾಗಿದೆ. ಉಚಿತ ಅಕ್ಕಿಯ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಅಗುವ ಮೂಲಕ ಅವರ ನೈತಿಕಶಕ್ತಿ ಹೆಚ್ಚಿಸಿದೆ ಎಂದರು.

57 ಸಾವಿರ ಕೋಟಿ ರೂ. ಅನುದಾನದ ಉಚಿತ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಸರ್ಕಾರವು ಶೀಘ್ರದಲ್ಲೇ ಐದು ಸಾವಿರ ಸರ್ಕಾರಿ ಬಸ್ಸುಗಳ ಖರೀದಿಗೆ ಮುಂದಾಗಿದೆ. ಹೊಸನಗರ ತಾಲೂಕಿನಲ್ಲೂ ಕನಿಷ್ಟ ಇಪ್ಪತ್ತು ಕೆಂಪು ಸರ್ಕಾರಿ ಬಸ್‌ಗಳ ಚಾಲನೆಗೆ ತಾವು ಬದ್ದರಾಗಿರುವುದಾಗಿ  ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಪಂ ಅಧ್ಯಕ್ಷೆ ಹೇಮಾವತಿ ಸತೀಶ್ , ಗ್ರಾಪಂ ಸದಸ್ಯರಾದ ತಿಮ್ಮಪ್ಪ ಬೆಳ್ಳೂರು , ಭವಾನಿ , ಪಲ್ಲವಿ , ರಾಜೇಶ್ ಆರ್ , ರವೀಂದ್ರ ಎಸ್ , ಅರುಣ್ ಎಲ್ , ಕವಿತಾ ವೈ , ಷಣ್ಮುಖಪ್ಪ ಹಾಗೂ ನೀರಾವರಿ ಅಧಿಕಾರಿ ಶಿವಪ್ರಸಾದ್ , ಮುಖಂಡರಾದ ಆಸೀಫ಼್ ಭಾಷಾ , ಮಹಮ್ಮದ್ ಷರೀಫ್ , ಮಹೇಂದ್ರ ಬುಕ್ಕಿವರೆ ಹಾಗೂ ಇನ್ನಿತರರಿದ್ದರು.

ಶಿಕ್ಷಕರಾದ ಶಿವಮೂರ್ತಿ ನಿರೂಪಿಸಿದರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಶ ಸ್ವಾಗತಿಸಿದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 hour ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

21 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

22 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago