ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್…

ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ ಮಧ್ಯೆಯೇ ಫೋನ್ ಗೆ ಏನಾಗಿದೆ ಎಂದು ಸಿಕ್ಕ ಸಿಕ್ಕವರಿಗೆ ಕೇಳುವಂತಾಗಿತ್ತು. ಕೆಲವರಂತೂ ನಿಮ್ಮ ಬಳಿ ಏರ್ ಟೆಲ್ ನಂಬರ್ ಇದೆಯಾ ಅದರ ನೆಟವರ್ಕ್ ಇದೆಯಾ ನೋಡಿ ಸ್ವಲ್ಪ ಎಂದು ಕೇಳಿಕೊಳ್ಳುತ್ತಿದ್ದರು. ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವವರು ಕೈಕೈ ಹಿಸುಕಿಕೊಳ್ಳುತಿದ್ದು ಕೆಲವು ಹೊಟೇಲ್ ಗಳಲ್ಲಿ ಊಟ ಹಣ ಪಾವತಿಸಲು ಒದ್ದಾಡುತ್ತಿದ್ದಾರೆ.. ಹೀಗೆ ಅಂಗಡಿ ಮುಂಗಟ್ಟು ,ಸಂತೆ ಮಾಲ್ ಗಳಲ್ಲಿ ಬೇರೆ ಮೊಬೈಲ್ ನೆಟ್ವರ್ಕ್ ಗಳ ಹಾಟ್ ಸ್ಪಾಟ್ವ್ ಕನೆಕ್ಷನ್ ಗೆ ಮೊರೆ ಹೋಗುತಿದ್ದಾರೆ.

ಪಟ್ಟಣದಾದ್ಯಂತ ಈ ಸಮಸ್ಯೆ ಕಂಡುಬಂದಿತ್ತು. ಯಾವ ಕಾರಣಕ್ಕಾಗಿ ಈ ಸಮಸ್ಯೆಯಾಗಿದೆ ಎಂದು ಯಾರನ್ನು ಕೇಳಬೇಕು ಎನ್ನುವುದೇ ಗೊತ್ತಾಗುತ್ತಿರಲಿಲ್ಲ. ಗ್ರಾಹಕರ ದೂರು ಕೇಂದ್ರಗಳಿಗೆ ಕರೆ ಮಾಡಬೇಕೆಂದರೆ ನೆಟವರ್ಕ್ ಇದ್ದರೆ ತಾನೇ? ಬಿಲ್ ಪಾವತಿ ಮಾಡುವುದು ಒಂದು ನಿಮಿಷ ತಡವಾದಲ್ಲಿ ಕನೆಕ್ಷನ್ ನ್ನು ನಿರ್ದಾಕ್ಷಿಣ್ಯವಾಗಿ ಕಡಿತಗೊಳಿಸುವ ಶಕ್ತಿ ಸಾಮರ್ಥ್ಯವನ್ನು ಹೊಂದಿರುವ ತಾಂತ್ರಿಕ ತಜ್ಞರಿಗೆ ಗ್ರಾಹಕರ ಪರದಾಡುವಿಕೆ ಗೋಚರಿಸದಿಲ್ಲದಿರುವಿಕೆ ಉಳಿದವರು ನೆಟ್ವರ್ಕ್ ನವರು ಕಂಡಂತೆ ಆಗಿದೆ.

ಕೆಲ ಪೋಸ್ಟ್ ಪೇಯ್ಡ್ ಗ್ರಾಹಕರು ಯಾವಾಗಲೂ ಫೋನ್ ಮಾಡಲೆಂದು ಇರಲಿ ಎಂದು ಏರ್ ಟೆಲ್ ಆರಿಸಿಕೊಂಡಿದ್ದರು. ಆದರೆ ಇಂದಿನ ಈ ಸಮಸ್ಯೆಯಿಂದಾಗಿ ಏನಾಯ್ತು ಬಿಲ್ ತುಂಬಿದ್ದೇವಲ್ಲಾ ನಾವು ಯಾಕೇ ಹೀಗಾಗ್ತಿದೆ ಎಂದು ಗೊಂದಲ ವ್ಯಕ್ತಪಡಿಸುತ್ತಿದ್ದರು.

ಪಟ್ಟಣದಲ್ಲಿ ಸೋಮವಾರ ಸಂತೆಯ ದಿನವಾದ್ದರಿಂದ ಇಂದಿನ ಈ ಸಮಸ್ಯೆಯಿಂದ ಹಲವಾರು ಜನತೆ ತೊಂದರೆ ಅನುಭವಿಸಿದರು.

ಇದೇ ರೀತಿ ಮೊಬೈಲ್ ನಲ್ಲಿ ಇಂಟರನೆಟ್ ಸಂಪರ್ಕ ಪಡೆದುಕೊಂಡು ವಾಟ್ಸಪ್, ಟ್ವಿಟ್ಟರ್, ಫೇಸ್ ಬುಕ್ ಎಂದು ಸಮಯ ಹರಣ ಮಾಡುವವರಿಗೂ ಕೂಡ ನೆಟ್ ವರ್ಕ್ ತೊಂದರೆಯಿಂದ ಸಾಕಷ್ಟು ಬೇಸರಗೊಂಡರು. ಈ ಬಗ್ಗೆ ಏರ್ ಟೆಲ್ ಕಂಪನಿಯವರನ್ನು ಕೇಳಿದರೆ ತಾಂತ್ರಿಕ ತೊಂದರೆಯಿಂದ ಹೀಗಾಗಿದೆ. ಅದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದು ಹೇಳಿ ಎಲ್ಲರನ್ನೂ ಸಾಗಹಾಕಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…

5 hours ago

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

13 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

1 day ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

1 day ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

1 day ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago