ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ | Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ.

1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.


2. ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದ‌ರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು.

3. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಆರು ಕಡೆ , ರೈಲ್ವೇ ಮೇಲು-ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.


4. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.

5. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.

6. ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 hour ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

21 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

22 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago