6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.


ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಗೊಳಿಸಿದೆ.ಬಜೆಟ್‌ಗೆ ಮುನ್ನವೇ ಕ್ಷೇತ್ರದ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳ ಕುರಿತು ಕ್ಷೇತ್ರದ ಮತದಾರರ ಮತ್ತು ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸಿ ಅಗತ್ಯ ಇರುವ ಕಡೆಯಲ್ಲಿಗೆ ಅಧ್ಯತೆಯ ಮೂಲಕ ಸರ್ಕಾರದಿಂದ ಅನುದಾನ ಕೋರಿ ಮನವಿ ಮಾಡಿಕೊಂಡ ಮೇರೆಗೆ ಸರ್ಕಾರ ಅನುಧಾನವನ್ನು ಬಿಡುಗಡೆ ಮಾಡಿದ್ದು ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡುವುದಾಗಿ ವಿವರಿಸಿದ ಅವರು ಕಳೆದ ವರ್ಷದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಡ್ಯಾಂ ಗಳು ಕೆರೆಕಟ್ಟೆಗಳು ತುಂಬದೇ ಅಂತರ್ಜಲ ಸಹ ಇಲ್ಲದೆ ಬಿತ್ತನೆ ಮಾಡಲಾದ ಬೆಳೆ ಸಹ ಕೈಗೆ ಸಿಗದೆ ಸಾಕಷ್ಟು ಸಂಕಷ್ಟವನ್ನು ನಮ್ಮ ರೈತ ಸಮುದಾಯ ಎದುರಿಸುವಂತಾಗಿದೆ ಎಂದು ಅತಂಕ ವ್ಯಕ್ತಪಡಿಸಿ ಮಳೆಯಿಲ್ಲದೇ ಕುಡಿಯುವ ನೀರಿನ ಸಮಸ್ಯೆ ಸಹ ಎದುರಾಗಿದೆ.ಯಾವುದೇ ಕಾರಣವನ್ನು ನೀಡದೆ ನೀರಿನ ಸಮಸ್ಯೆ ಉದ್ಬವವಾದಲ್ಲಿ ತಕ್ಷಣ ಗ್ರಾಮಾಡಳಿತ ತುರ್ತು ಬೋರ್‌ವೆಲ್ ತೆಗೆಸಲು ಟಾಸ್ಕಾಪೋರ್ಸ್ನಲ್ಲಿ ಅಥವಾ ತುರ್ತು ಪರಿಹಾರ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗಿದ್ದು ಇದರ ಸದ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಶರಾವತಿ ಮುಳುಗಡೆ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸುವುದಾಗಿ ತಿಳಿಸಿ ಅರಣ್ಯ ಪ್ರದೇಶದಲ್ಲಿ ಹೊಸದಾಗಿ ಒತ್ತುವರಿ ಮಾಡದೇ ಈ ಹಿಂದೆ ಅರಣ್ಯ ಇಲಾಖೆಯವರು ಗುರುತಿಸಲಾದ ಜಾಗ ಹೊರತು ಪಡಿಸಿ ಸಾಗುವಳಿ ಮಾಡುವ ರೈತರಿಗೆ ಹಕ್ಕು ಪತ್ರ ನೀಡುವುದರ ಬಗ್ಗೆ ಇನ್ನೊಮ್ಮೆ ಅರಣ್ಯ ಕಂದಾಯ ಇಲಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕೊಡಿಸುವುದಾಗಿ ತಿಳಿಸಿದರು.

ಚಕ್ರಾನಗರದಿಂದ ಕೆರೆಹಳ್ಳಿ-ಕಸಬಾ ಹೊಸನಗರ ವ್ಯಾಪ್ತಿಗೆ ೪೧೭ ಕೋಟಿ ರೂ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಹಣ ಬಿಡುಗಡೆಯಾಗಿದ್ದು ಟೆಂಡರ್ ಸಹ ಕರೆಯಲಾಗಿದೆ.ಮುಂದಿನ ವರ್ಷದಲ್ಲಿ ಪೈಪ್ ಲೈನ್ ಕಾಮಗಾರಿ ಮುಗಿಸಿ ನೀರು ತರುವುದಾಗಿ ಭರವಸೆ ನೀಡಿದರು.

ಬಂಗಾರಪ್ಪಾಜಿಯವರು ಹೇಳುವಂತೆ ಅಭಿವೃದ್ದಿಗಿಂತ ಮತದಾರರ ಹಿತ ಮುಖ್ಯ ಅಭಿವೃದ್ಧಿ ಯಾವುದೇ ಸರ್ಕಾರ ಬರಲಿ ಅದು ಅಗುತ್ತದೆ.ಅದರೆ ಜನಸಾಮಾನ್ಯರಿಗೆ ಏನಾದರೂ ತೊಂದರೆಗಳಾದರೆ ತಕ್ಷಣ ಸ್ಪಂದಿಸಿ  ಪರಿಹಾರ ಕಲ್ಪಿಸಿದಾಗ ಮಾತ್ರ ಆತ ಜನನಾಯಕನಾಗಲು ಸಾಧ್ಯವೆಂದರು.

ಅರಸಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜಯಮ್ಮ ಉಂಡಗೋಡು ನಾಗಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ,ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ,ಅರಸಾಳು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ದೇವರಾಜ,ಸದಸ್ಯರಾದ ಉಮಾಕರ,ಯೋಗೇಂದ್ರ,ಉಮೇಶ,ಅರುಣ್ ಅರಸಾಳು,ನಾಗಪ್ಪ ,ಸೋಮಶೇಖರ್,ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಸದಸ್ಯರಾದ ಆಸೀಫ಼್ ಭಾಷಾ, ಗಣಪತಿ, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಹಾಗೂ ಪಕ್ಷದ ಮುಖಂಡರುಗಳಾದ ಹರ್ಷ,ರವೀಂದ್ರ, ಮಂಜು, ಶ್ರೀಧರ್, ವಾಸುದೇವಾ,ರಘುಪತಿ,ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

4 hours ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

4 hours ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

1 day ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

1 day ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 day ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago