Headlines

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ


ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ.

ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ.

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ ಗೌತಮಪುರ ಸಮೀಪ ಆನಂದಪುರದಿಂದ ಶಿಕಾರಪುರ ಕಡೆ ಹೋಗುತ್ತಿದ್ದ ಕಾರಿಗೆ ಬೈಕುಗಳ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ಭೀಕರತೆಗೆ ಸ್ಥಳದಲ್ಲಿಯೇ ಭೀಮೇಶ್ ( 42 ) ಸಾವನ್ನಪ್ಪಿರುತ್ತಾನೆ. ಬೈಕ್ ನ ಇನ್ನೊಬ್ಬ ಸವಾರ ಪ್ರತಾಪ್ ರವರ ಎರಡು ಕಾಲುಗಳು ಸಂಪೂರ್ಣವಾಗಿ ನಜ್ಜುಗಜ್ಜಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ಆನಂದಪುರ ಪೊಲೀಸರು ದೌಡಾಯಿಸಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Exit mobile version