Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??


ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ.

ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಘಟನೆಯ ಹಿನ್ನಲೆ :

ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯು ನೂರು ವರ್ಷ ಪೂರೈಸಿದ್ದು, ಶತಮಾನೋತ್ಸವ ಕಾರ್ಯಕ್ರಮ ಆಚರಿಸಲು ಶಾಲಾಡಳಿತ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಒಳಗೊಂಡ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಸದಸ್ಯ ನೇರಲೆ ರಮೇಶ್ ಎಂಬುವವರು ಶಾಲೆ ನೂರು ವರ್ಷ ಪೂರ್ಣಗೊಳಿಸಿರುವುದರ ಕುರಿತು ಅನುಮಾನಗಳಿವೆ. ನೂರು ವರ್ಷ ಪೂರೈಸಿದ ಕುರಿತು ದಾಖಲೆಗಳು ಶಾಲೆಯಲ್ಲಿ ಇವೆಯೇ ಎಂದು ಪ್ರಶ್ನಿಸಿದ್ದರು. ಸಭೆ ಮುಗಿದ ಬಳಿಕ ಶಾಲಾವರಣದಲ್ಲಿ ಮತ್ತೆ ಪ್ರಸ್ತಾಪವಾಗಿ, ಶಾಲಾಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್ ಹಾಗೂ ಸದಸ್ಯ ರಮೇಶ್ ನಡುವೆ ಮಾತಿನ ಚಕಮಕಿ ನಡೆಯಿತು.

ನಂತರ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅಶ್ವಿನಿಕುಮಾರ್ ಸದಸ್ಯ ರಮೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರಮೇಶ್ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮ್ಮ ಮೇಲೆ ನಡೆದ ಹಲ್ಲೆ ನಡೆಸಿದ ಆರೋಪಿ ಶಾಲಾ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಸಹ ಸಲ್ಲಿಸಿದ್ದಾರೆ.

ಪ್ರತಿ ದೂರು:

ಸಮಿತಿಯ ಸದಸ್ಯ ರಮೇಶ್ ಎಂಬುವವರು ಸಭೆಗೆ ಮದ್ಯಪಾನ ಮಾಡಿ ಬಂದಿದ್ದು, ಸಭೆಯಿಂದ ಹೊರ ನಡೆಯುವಂತೆ ತಿಳಿಸಿದ್ದೆ. ಇದಕ್ಕೆ ಒಪ್ಪದೇ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಶ್ವಿನಿಕುಮಾರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.


ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿರುವ ರಮೇಶ್ ನ್ನು ಬಿಜೆಪಿ ಪಕ್ಷದ ಪ್ರಮುಖರಾದ ಗಣಪತಿ ಬಿಳಗೋಡು, ಎ.ವಿ.ಮಲ್ಲಿಕಾರ್ಜುನ, ಸುರೇಶ್ ಸ್ವಾಮಿರಾವ್, ಶಿವಕುಮಾರ್, ಮಂಜುನಾಥ್ ಎಚ್.ಎಸ್., ಮನೋಧರ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಅವರಿಗೆ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದರು.


ಒಟ್ಟಾರೆಯಾಗಿ ಶಾಲಾಭಿವೃದ್ದಿ ಸಮಿತಿಯ ಸಭೆಯಲ್ಲಿ ನಡೆದ ಗೊಂದಲವೀಗ ರಾಜಕೀಯ ತಿರುವು ಪಡೆದುಕೊಂಡಿದ್ದು ಸೋಮವಾರ ಮಾಜಿ ಸಚಿವರ ಪ್ರತಿಭಟನೆ ನಡೆಯುತ್ತದೆ ಎನ್ನಲಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

22 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

22 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

23 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago