ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ
ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ. 2023-24 ನೇ ಸಾಲಿನ ಪ್ರಥಮ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆ ಇದಾಗಿದ್ದು ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ.
ಪಂಚಾಯತ್ ಅಧ್ಯಕ್ಷೆ ಸುಮಂಗಳ ರವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆ ಬೆಳಗ್ಗೆ 11-30 ಕ್ಕೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು.
ಕೋರಂ ಇಲ್ಲದೆ ಸಭೆ ನಡೆಸುವಂತಿಲ್ಲ ಎಂದು ಗ್ರಾಮಸ್ಥರಾದ ಉಲ್ಲಾಸ್ ಭಟ್ ,ಈರನಬೈಲ್ ಸತೀಶ್ ,ಕಿರಣ್ ಬಿ ಡಿ , ಗುರುರಾಜ್ ಭಂಡಾರಿ ,ರಾಘ , ಸಣ್ಣಕಲ್ ಗುರು ಮೊದಲಾದವರು ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಗ್ರಾಪಂ ಪಿಡಿಓ ರಮೇಶ್ ಗ್ರಾಮ ಸಭೆಯ ಕುರಿತು ಸಾಕಷ್ಟು ಪ್ರಚಾರ ನೀಡಲಾಗಿದ್ದು, ಜನರು ಭಾಗಿಯಾಗುತ್ತಿಲ್ಲ. 12.30 ರವರೆಗೆ ಕಾದು ನೋಡುವ ಆದಾಗ್ಯೂ ಜನ ಸೇರದಿದ್ದಲ್ಲಿ ಸಭೆ ಮುಂದೂಡುವ ಎಂದು ವಿನಂತಿಸಿದರು.
ಕಾಟಾಚಾರಕ್ಕಾಗಿ ಗ್ರಾಮ ಸಭೆಯೇ ?
ಒಂದು ಗಂಟೆಯ ಬಳಿಕ ಕೆಲವು ಮಂದಿ ಗ್ರಾಮಸ್ಥರು ಸಭೆಯಲ್ಲಿ ಭಾಗಿಯಾದರು. ಆದರೆ ಸಾಕಷ್ಟು ಜನ ಗ್ರಾಮಸ್ಥರಿಲ್ಲದೆ ಗ್ರಾಮ ಸಭೆ ನಡೆಸಲಾಗುವುದಿಲ್ಲ, ಕಾಟಚಾರಕ್ಕಾಗಿ ಗ್ರಾಮ ಸಭೆ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ ಗ್ರಾಮಸ್ಥರು ಜನರಿಗೆ ನಿಜವಾಗಿ ಮಾಹಿತಿ ಕೊಡುವ ಉದ್ದೇಶದಿಂದ ಗ್ರಾಮ ಸಭೆ ಮಾಡುತ್ತೀದ್ದೀರಿ ಎಂದಾದರೆ ಸಭೆಯನ್ನು ಮುಂದೂಡಿ ಎಂದು ಆಗ್ರಹಿಸಿದರು.
ಇನ್ನು ಕೆಲವರು ನಾವು ಕೆಲಸ ಬಿಟ್ಟು ಬಂದಿದ್ದೇವೆ ಹೀಗೆ ಸಭೆ ಮುಂದೂಡುವುದಾದರೆ ನಮ್ಮ ದಿನ ಕೂಲಿಯನ್ನು ನೀಡಿ ಎಂದು ಆಕ್ರೋಶ ಹೊರ ಹಾಕಿದರು.
ನಂತರ ಕೋರಂ ಕೊರತೆಯ ಹಿನ್ನಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆಯನ್ನು ಮುಂದೂಡಲಾಯಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್