Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ
ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ.
ಭಾನುವಾರ ರಿಪ್ಪನ್ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು
2023ರ ಅ.29ಕ್ಕೆ ಚುನಾವಣೆ ನಿಗದಿಯಾಗಿತ್ತು ಆದರೆ ಆಡಳಿತ ಮಂಡಳಿಯಲ್ಲಿದ್ದ ಕೆಲವು ಸದಸ್ಯರು ಹೈಕೋರ್ಟಿನಿಂದ ಚುನಾವಣೆಗೆ ತಡೆಯಾಜ್ಞೆ ತಂದಿದ್ದರು ನಂತರ ಹೈಕೋರ್ಟ್ ಅರ್ಜಿ ವಜಾಗೊಂಡು ಫೆ.04 ಚುನಾವಣೆಗೆ ಆದೇಶ ಮಾಡಿತ್ತು.
• ರಿಪ್ಪನ್ಪೇಟೆ ಕ್ಷೇತ್ರದಿಂದ ಎಂ.ಬಿ.ಲಕ್ಷ್ಮಣ ಗೌಡ ಎಂ.ಎಂ.ಪರಮೇಶ್, ಸುಮಂಗಳ ಹರೀಶ್
•ಹಾಲುಗುಡ್ಡೆ ಕ್ಷೇತ್ರದಿಂದ ಹೆಚ್.ವಿ.ಹರೀಶ್, ಹೆಚ್.ಆರ್.ಅಶೋಕ, ಹೆಚ್ ವೈ ಸಂತೋಷ್ಕುಮಾರ್ (ಚಿಂತು) ಹೆಚ್.ಎಸ್. ರಾಜು, ಶಿಲ್ಪ ರಾಜೇಶ್
•ಕಲ್ಲೂರು ಕ್ಷೇತ್ರದಿಂದ ಕೆ.ಸಿ.ತೇಜಮೂರ್ತಿ, ಈ.ಡಿ.ಮಂಜುನಾಥ, ಸತ್ಯವತಿ ಶ್ರೀಧರ,
•ಕೋಟೆತಾರಿಗ ಕ್ಷೇತ್ರದಿಂದ ಪಿ.ಮಂಜುನಾಥ ಕೆ ಸಿ ಮಹೇಶ, ವಜ್ರಾಕ್ಷಿ, ಹೋ.ಮ. ಲೋಕಪ್ಪಗೌಡ,
•ಕೆರೆಹಳ್ಳಿ ಕ್ಷೇತ್ರದಿಂದ ಬಿ.ಹೆಚ್.ಷಣ್ಮುಖಪ್ಪಗೌಡ,
•ಹೆದ್ದಾರಿಪುರ ಕ್ಷೇತ್ರದಿಂದ ಹೆಚ್.ಪಿ.ರಾಜೇಶ್,
•ಗುಬ್ಬಿಗ ಕ್ಷೇತ್ರದಿಂದ ಜಿ.ದಿನೇಶ್
•ಗರ್ತಿಕೆರೆ ಕ್ಷೇತ್ರದಿಂದ ಟಿ.ಎಂ.ಕೃಷ್ಣಮೂರ್ತಿ ಮತ್ತು ಬುಕ್ಕಿವರೆ ಕ್ಷೇತ್ರದಿಂದ ಹೆಚ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್