Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ
ಕಳ್ಳತನವಾದ ಬೈಕ್ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ರಿಪ್ಪನ್ಪೇಟೆ ಠಾಣೆ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗದ ತೊಪ್ಪಿನಘಟ್ಟದ ಡ್ರೈವರ್ ಕೆಲಸ ಮಾಡುವ 23 ವರ್ಷದ ಸತೀಶ್ ಎಲ್ ಎಸ್ ಹಾಗೂ ಅಪ್ರಾಪ್ತ (ಕಾನೂನು ಸಂಘರ್ಷಕ್ಕೊಳಗಾದ ಬಾಲಕ) ಸೇರಿದಂತೆ ಇಬ್ಬರು ಬಂಧಿತ ಆರೋಪಿಗಳಾಗಿದ್ದಾರೆ.
ಶನಿವಾರ ರಾತ್ರಿ ದೂನ ಗ್ರಾಮದ ರೇಣುಕಪ್ಪ ಎಂಬುವವರು ರಸ್ತೆಯ ಪಕ್ಕದಲ್ಲಿರುವ ಅವರ ತೋಟಕ್ಕೆ ನೀರು ಹಾಯಿಸಲು ತಮ್ಮ ಮೋಟಾರ್ ಬೈಕಿನಲ್ಲಿ ರಾತ್ರಿ 9-00 ಗಂಟೆಗೆ ಹೋಗಿ ಬೈಕನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ನಂತರ ತೋಟದ ಒಳಗಡೆ ಹೋಗಿ ನೀರು ಮೋಟಾರ್ ಆನ್ ಮಾಡಿ ನಂತರ ಕೂಡಲೇ ರಸ್ತೆಗೆ ಬಂದಿದ್ದು ಅಲ್ಲಿ ನಿಲ್ಲಿಸಿ ಹೋಗಿದ್ದ ಅವರ ಕೆಎ-15 ಎಸ್ 8452 ನೇ ನಂಬರಿನ ಹೊಂಡ ಡ್ರೀಮ್ ಯುಗ ಮೋಟಾರ್ ಬೈಕ್ ಇರಲಿಲ್ಲ ತೆಗೆದುಕೊಂಡು ಹೋಗಿರಬಹುದು ಎಂದು ರಾತ್ರಿ ಎಲ್ಲ ಕಡೆ ಹುಡುಕಾಡಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ದೂರು ದಾಖಲಾಗುತಿದ್ದಂತೆ ಕಾರ್ಯ ಪ್ರವೃತ್ತರಾದ ಪಟ್ಟಣದ ಪಿಎಸ್ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳ ತಂಡ ಅಪ್ರಾಪ್ತ ಯುವಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ 80 ಸಾವಿರ ರೂ ಮೌಲ್ಯದ ಕೃತ್ಯಕ್ಕೆ ಬಳಸಿದ ಬೈಕ್ ಹಾಗೂ ಕಳ್ಳತನವಾಗಿದ್ದ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.
ಆಗಿದ್ದು ಆಕ್ಸಿಡೆಂಟ್ – ಸಿಕ್ಕಿದ್ದು ಆರೋಪಿ
ಶನಿವಾರ ರಾತ್ರಿ ಪಟ್ಟಣದ ಪೊಲೀಸರು ಗಸ್ತು ತಿರುಗುತಿದ್ದಾಗ ದೂನ ಸಮೀಪದಲ್ಲಿ ಬೈಕ್ ಅಪಘಾತಕ್ಕೀಡಾಗಿ ಯುವಕನೊಬ್ಬನ ಕಾಲಿಗೆ ತೀವ್ರ ಪೆಟ್ಟಾಗಿತ್ತು ಈ ಹಿನ್ನಲೆಯಲ್ಲಿ ಆ ಯುವಕನನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಸೂಕ್ತ ಚಿಕಿತ್ಸೆ ನೀಡಲಾಗಿತ್ತು.
ಬೆಳಿಗ್ಗೆ 9.30 ಸಮಯದಲ್ಲಿ ಬೈಕ್ ಕಳ್ಳತನದ ದೂರು ದಾಖಲಾಗುತ್ತಿದ್ದಂತೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ಪೊಲೀಸ್ ಶೈಲಿಯಲ್ಲಿ ವಿಚಾರಿಸಿದಾಗ ಆರೋಪಿಯ ಬಗ್ಗೆ ಬಾಯ್ಬಿಟ್ಟಿದ್ದಾನೆ ಈ ಮಾಹಿತಿಯನ್ನಾಧರಿಸಿ ಪ್ರಮುಖ ಆರೋಪಿಯನ್ನು ಕೇವಲ 2 ಗಂಟೆಯೊಳಗೆ ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಪರಮೇಶ್ವರ್ , ಸಂತೋಷ್ ಕೊರವರ ,ನವೀನ್ ಹಾಗೂ ಮಧುಸೂಧನ್ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್