Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ
ರಿಪ್ಪನ್ಪೇಟೆ : ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅಗ್ನಿ ಅವಘಡ ಸಂಭವಿಸಿ ಮುಂದಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ನಡೆದಿದೆ.
ಹೌದು ಭಾನುವಾರ ಪಟ್ಟಣದ ಬೆಳಕೋಡು ಗ್ರಾಮದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳ ತಂಡಕ್ಕೆ ಜಗದೀಶ್ ಎಂಬುವವರ ಮನೆ ಪಕ್ಕದ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿರುವುದು ಕಂಡುಬಂದಿದೆ.ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಬೆಂಕಿ ಆರಿಸುವ ಕೆಲಸಕ್ಕೆ ಮುಂದಾಗಿ ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಷ್ಟೊತ್ತಿಗಾಗಲೇ ತೋಟದಲ್ಲಿ ಕೆಲಸ ಮಾಡುತಿದ್ದ ಮನೆಯವರು ಕೂಡ ಓಡಿಬಂದು ಬೆಂಕಿ ನಂದಿಸಲು ಮುಂದಾಗಿದ್ದಾರೆ.
ಬೆಳಕೋಡು ಗ್ರಾಮದ ಜಗದೀಶ್ ಮನೆಯಲ್ಲಿ ಎಲ್ಲಾರೂ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಇಬ್ಬರು ಮಕ್ಕಳು ಬೆಂಕಿ ಪೊಟ್ಟಣದಲ್ಲಿ ಆಟವಾಡುತ್ತಿರುವಾಗ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿದೆ ಇದರಿಂದ ಬೆದರಿದ ಮಕ್ಕಳು ಮನೆಯ ಒಳಗೆ ಹೋಗಿ ಅವಿತು ಕುಳಿತಿದ್ದಾರೆ. ಮನೆಯ ಪಕ್ಕದಲ್ಲಿಯೇ ಇದ್ದ ಹುಲ್ಲಿನ ಗೊಣಬೆಯ ಬೆಂಕಿ ಮನೆಗೆ ಆವರಿಸಿದ್ದರೆ ದೊಡ್ಡ ಅನಾಹುತವೆ ನಡೆಯುತಿತ್ತು.
ಅದೃಷ್ಟವಶಾತ್ ಈ ಸಂಧರ್ಭದಲ್ಲಿ ಅದೇ ಮಾರ್ಗದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಮನೆಗೆ ಬೆಂಕಿ ಆವರಿಸುವುದು ತಪ್ಪಿದಂತಾಗಿದೆ.ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.ಈ ಘಟನೆಯಲ್ಲಿ ರೈತ ಜಗದೀಶ್ ಗೆ ಸೇರಿದ 35 ಸಾವಿರ ರೂ ಮೌಲ್ಯದ. 450 ಪಿಂಡಿ ಹುಲ್ಲು ಬೆಂಕಿಗೆ ಅಹುತಿಯಾಗಿದೆ.
ಒಟ್ಟಾರೆಯಾಗಿ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ಕೈ ತಪ್ಪಿದ್ದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪೊಲೀಸರ ಕಾರ್ಯ ವೈಖರಿಗೆ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸೋಮಶೇಖರ್ , ಮಂಜುನಾಥ್ , ನವೀನ್ ಹಾಗೂ ಮಧುಸೂಧನ್ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್