Ripponpete | ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು.

ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು


ರಿಪ್ಪನ್ ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಶ್ವಿಸಿಯಾಗಿ ಕಾರ್ಯನಿರ್ವಹಿಸಿ ನುಡಿದಂತೆ ನಡೆದಿದೆ, ಸರಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಸಾಗರ -ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಕೆಂಚನಾಲ  ಗ್ರಾಮ ಪಂಚಾಯತಿ ವ್ಯಾಪ್ತಿಯ ಅಂಗನವಾಡಿವಾಡಿ ಕೇಂದ್ರ ಕಟ್ಟಡ, ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ, ಅಕ್ಷರ ದಾಸೋಹ ಕೊಠಡಿ,. ಎನ್. ಆರ್. ಎಲ್. ಎಂ. ಕೊಠಡಿ ಉದ್ಘಾಟನೆ, ಹಾಗೂ  ಕೆಂಚನಾಲ ಮಾರಿಕಾಂಬ ದೇವಸ್ಥಾನ ಸಮೀಪ ಸಮುದಾಯ ಭವನ ಮತ್ತು ಜಲಜೀವನ್ ಯೋಜನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ  ನೆರವೇರಿಸಿ ಮಾತನಾಡಿದ ಅವರು  ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮತದಾರರಿಗೆ ನೀಡದ್ದ ಐದು ಗ್ಯಾರೆಂಟಿಗಳನ್ನು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸುವ ಮೂಲಕ ಇತಿಹಾಸ ನಿರ್ಮಿಸಿದೆ.


ರಾಜ್ಯ ಸರ್ಕಾರವು ಜಾತಿ, ಧರ್ಮ, ವರ್ಗ ಮೀರಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಶೋಷಿತರ, ದೀನ-ದಲಿತರ ಪರವಾಗಿ ನಿಂತಿದೆ.
ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಬೆಲೆ ಏರಿಕೆಯಿಂದಾಗಿ ಜನಜೀವನ ನಡೆಸುವುದು ಕಷ್ಟಸಾಧ್ಯವಾಗಿರುವ ಈ ಕಾಲಘಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಹಕಾರಿ ಆಗಿದ್ದು, ಮುಂಬರುವ ದಿನಗಳಲ್ಲಿ ಅವರ ಜೀವನಮಟ್ಟ ಸುಧಾರಿಸಲಿದೆ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದರು. ಸರ್ಕಾರದ  ಎಲ್ಲಾ ಗ್ಯಾರೆಂಟಿ ಯೋಜನೆಗಳು ಈಗಾಗಲೇ ಅರ್ಹ ಫಲಾನುಭವಿಗಳ ಕೈ ಸೇರಿವೆ ಎಂದರು.

‘ಗ್ಯಾರಂಟಿ’ ರಾಜ್ಯ ಸರ್ಕಾರದ ಮಹತ್ವಾಂಕ್ಷೆ ಯೋಜನೆ ಆಗಿದ್ದು, ಅರ್ಹರಿಗೆ ಯೋಜನೆಯ ಫಲ ಶೀಘ್ರವಾಗಿ ತಲುಪಿಸಲು ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ಸರ್ಕಾರ ರಚಿಸಿದೆ. ಈ ಎಲ್ಲಾ ಗ್ಯಾರಂಟಿ ಯೋಜನೆಗಳಿಂದ ಕುಟುಂಬ ಒಂದಕ್ಕೆ ವಾರ್ಷಿಕ ಸರಾಸರಿ ರೂ ಅರವತ್ತು ಸಾವಿರ ಹಣ ಫಲಾನುಭವಿಗಳಿಗೆ ಉಳಿತಾಯ ಆಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲತೆ ಹೆಚ್ಚುತ್ತಿದೆ. ಕುಟುಂಬ ನಿರ್ವಹಣೆ ಸುಗಮವಾಗಿದೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಸಹಕಾರಿ ಆಗಿದೆ.

ಶಕ್ತಿಯೋಜನೆಯಿಂದ ಮಹಿಳೆಯರು ರಾಜ್ಯ ವ್ಯಾಪಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ ಮೂಲಕ ಅವರ ಆತ್ಮಶಕ್ತಿ ಹೆಚ್ಚಾಗುತ್ತಿದೆ. ಉಚಿತ ವಿದ್ಯುತ್ ನೀಡಿಕೆಯು ಹಣ ಉಳಿತಾಯಕ್ಕೆ ಕಾರಣವಾಗಿದೆ. ಉಚಿತ ಅಕ್ಕಿಯ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಅಗುವ ಮೂಲಕ ಅವರ ನೈತಿಕಶಕ್ತಿ ಹೆಚ್ಚಿಸಿದೆ ಎಂದರು.


57 ಸಾವಿರ ಕೋಟಿ ರೂ. ಅನುದಾನದ ಉಚಿತ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಸರ್ಕಾರವು ಶೀಘ್ರದಲ್ಲೇ ಐದು ಸಾವಿರ ಸರ್ಕಾರಿ ಬಸ್ಸುಗಳ ಖರೀದಿಗೆ ಮುಂದಾಗಿದೆ. ಹೊಸನಗರ ತಾಲೂಕಿನಲ್ಲೂ ಕನಿಷ್ಟ ಇಪ್ಪತ್ತು ಕೆಂಪು ಸರ್ಕಾರಿ ಬಸ್‌ಗಳ ಚಾಲನೆಗೆ ತಾವು ಬದ್ದರಾಗಿರುವುದಾಗಿ  ತಿಳಿಸಿದರು.

ಇದೇ ಸಂದರ್ಭದಲ್ಲಿ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಯಲ್ಲಿ ವಾಸವಾಗಿದ್ದು  ಸರಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ರಾದ ನೌಕರರಿಗೆ ಹಾಗೂ  ಕಲೆ, ಸಾಹಿತ್ಯ, ಕೃಷಿ, ಕ್ರೀಡೆಯಲ್ಲಿ ಸಾಧನೆ ಮಾಡಿದ  ಸಾಧಕರನ್ನು ಮತ್ತು   ನಿವೃತ್ತ ಯೋಧರನ್ನು ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕೆಂಚನಾಲ ಗ್ರಾಮ ಪಂಚಾಯತಿ ಅಧ್ಯಕ್ಷ  ಉಬೇದುಲ್ಲಾ ಶರೀಫ್  ಮಾತನಾಡಿ ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ ಪಲಾನುಭವಿಗಳಿಗೆ ತಲುಪುವಂತಹ ಪ್ರಕ್ರಿಯೆನ್ನು  ಗ್ರಾಮಾಡಳಿತ ಮಾಡಿದ್ದು, ಮುಂದಿನ ದಿನಗಳಲ್ಲಿ ಶಾಸಕರ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ  ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಗೊಳಿಸಲಾಗುವುದು, ಇದಕ್ಕೆ ಶಾಸಕರು ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದ್ದಾರೆ ಎಂದರು.

ಮಾರಿಕಾಂಬಾ ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ. ಎಂ ಬಸವರಾಜ್,ಇಒ ನರೇಂದ್ರ ಕುಮಾರ್, ಬಿಇಒ ಕೃಷ್ಣಮೂರ್ತಿ,  ಗ್ರಾಮ ಪಂಚಾಯತಿ  ಉಪಾಧ್ಯಕ್ಷೆ ರಮ್ಯಾ, ಸದಸ್ಯ ರಾದ ಮಹಮದ್ ಶರೀಫ್, ಕೃಷ್ಣ, ಪರಮೇಶ್ವರ್,ಪುಟ್ಟಮ್ಮ, ಹೂವಮ್ಮ, ಗೌರಮ್ಮ ಅರಸಾಳು ಗ್ರಾ.ಪಂ. ಮಾಜಿ ಅಧ್ಯಕ್ಷ  ಉಮಾಕರ್, ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ರಾದ ಮಧುಸೂದನ್, ಆಶೀಫ್ ಬಾಷಾ, ಗಣಪತಿ, ಸಿಡಿಪಿ ಒ ಸುರೇಶ್,   ರಾಜು ಬರುವೆ,ಮೊಬೈಲ್ ಹರ್ಷ, ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ  ಗ್ರಾಮಕ್ಕೆ ಆಗಮಿಸಿದ ಅವರನ್ನು ನೂರಾರು ಅಭಿಮಾನಿಗಳು  ಪಟಾಕಿ ಸಿಡಿಸಿ, ಬೃಹತ್ ಮಾಲಾರ್ಪಣೆ ಮಾಡುವ ಮೂಲಕ ಬರ ಮಾಡಿಕೊಂಡರು.

ಕೆಂಚನಾಲ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಪಿಡಿಒ ರವಿ ಸ್ವಾಗತಿಸಿ  ಶಿಕ್ಷಕಿಯರಾದ ಫಾಜಿಯ ಸರವತ್ ನಿರೂಪಿಸಿ, ಭಾಗ್ಯಲಕ್ಷ್ಮೀ ವಂದಿಸಿದರು.

ತಾರತಮ್ಯ ಎಸಗಿದರೆ ಕಠಿಣ ಕ್ರಮ ಪಿಡಿಒ ಗಳಿಗೆ ಎಚ್ಚರಿಕೆ : ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅನುಷ್ಠಾನ ಗೊಳಿಸಿರುವ ಜಲ ಜೀವನ್ ಯೋಜನೆ ಅಡಿ  ಪ್ರತಿ ಕುಟುಂಬಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು  ಕಡ್ಡಾಯವಾಗಿ ನೀಡಲೇ ಬೇಕು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು  ಇದರಲ್ಲಿ  ಜಾತಿ, ಮತ, ಪಂಥ, ಹಾಗೂ  ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರತರು ಎಂದು ತಾರತಮ್ಯ  ಎಸಗಿದರೆ ನಿರ್ಧಾಕ್ಷಣ್ಯವಾಗಿ   ಅಮಾನತ್ತು ಗೊಳಿಸಲಾಗುವುದು  : ಗೋಪಾಲ ಕೃಷ್ಣ ಬೇಳೂರು. ಶಾಸಕರು. ಸಾಗರ -ಹೊಸನಗರ ವಿಧಾನ ಸಭಾ ಕೇತ್ರ 

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

2 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

22 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

22 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

22 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

23 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago