Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!
ರಿಪ್ಪನ್ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ತುಂಬಿಕೊಂಡು ಕೋಡೂರು ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ದಾಳಿ ನಡೆಸಿ ಮೂರು ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೆಚ್ ಸಿ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.