ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News


ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ.

ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ ದಾಸರಾಗಿರುತ್ತಾರೆ.. ಕುಡಿದೇ ಶಾಲೆಗೆ ಬರುತ್ತಾರೆ.. ಶಾಲೆಯಲ್ಲೇ ಕುಡಿಯುತ್ತಾರೆ.. ಇದೇ ರೀತಿ ಶಿಕ್ಷಕನೊಬ್ಬ ಕುಡಿದು ಬಂದು ವಿದ್ಯಾರ್ಥಿಗಳಿಂದ ಧರ್ಮದೇಟು ತಿಂದಿದ್ದಾನೆ..


ಚಪ್ಪಲಿಯಿಂದ ಅಟ್ಟಾಡಿಸಿದ ವಿದ್ಯಾರ್ಥಿಗಳು;

ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಬುದ್ಧಿ ಕಲಿಸಬೇಕು.. ಆದ್ರೆ ಇಲ್ಲಿ ವಿದ್ಯಾರ್ಥಿಗಳೇ ಶಿಕ್ಷಕನೊಬ್ಬನಿಗೆ ಬುದ್ಧಿ ಕಲಿಸಿದ್ದಾರೆ.. ದಿನಾ ಕಂಠಪೂರ್ತಿ ಕುಡಿದು ಶಾಲೆಗೆ ಬರ್ತಿದ್ದ ಶಿಕ್ಷಕನಿಗೆ ಚೆನ್ನಾಗಿ ಬುದ್ಧಿ ಕಲಿಸಿದ್ದಾರೆ.. ವಿದ್ಯಾರ್ಥಿಗಳೆಲ್ಲಾ ಸೇರಿಕೊಂಡು ಚಪ್ಪಲಿ ಸೇವೆ ಮಾಡಿದ್ದಾರೆ.. ಶಾಲಾ ಆವರಣದಲ್ಲೆಲ್ಲಾ ಆಟ್ಟಾಡಿಸಿದ್ದಾರೆ.. ಕೊನೆಗೆ ವಿದ್ಯಾರ್ಥಿಗಳ ಆಕ್ರೋಶದಿಂದ ಭಯಭೀತನಾದ ಶಿಕ್ಷಕ ಬೈಕ್‌ ಏರಿ ಪರಾರಿಯಾಗಿದ್ದಾರೆ..

ಛತ್ತಿಸ್‌ಗಢ ರಾಜ್ಯದಲ್ಲಿ ಈ ಘಟನೆ;

ಛತ್ತೀಸ್‌ಗಡ ರಾಜ್ಯದ ಬಸ್ತರ್ ಜಿಲ್ಲೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ತಪ್ಪು ಮಾಡಿದ ಶಿಕ್ಷಕನಿಗೆ ಶಾಲೆಯ ಮಕ್ಕಳೇ ಪಾಠ ಕಲಿಸಿದ್ದಾರೆ.. ಚಪ್ಪಲಿ ಹಿಡಿದು ಅಟ್ಟಾಡಿಸಿದ್ದಾರೆ.. ಈ ಶಿಕ್ಷಕ ಪ್ರತಿದಿನ ಕಂಠಪೂರ್ತಿ ಕುಡಿದು ಶಾಲೆಗೆ ಬರುತ್ತಿದ್ದ. ಕುಡಿದ ಮತ್ತಿನಲ್ಲಿ ಯಾವಾಗಲೂ ವಿದ್ಯಾರ್ಥಿಗಳನ್ನು ಕೆಟ್ಟ ಪದಗಳನ್ನು ಬಳಸಿ ನಿಂದನೆ ಕೂಡಾ ಮಾಡುತ್ತಿದ್ದ.. ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ.. ಆದ್ರೆ ಪಾಠ ಮಾತ್ರ ಮಾಡುತ್ತಿರಲಿಲ್ಲ.. ಬೆಳ್‌ ಬೆಳಗ್ಗೆಯೇ ಕುಡಿದು ತೂರಾಡುತ್ತಿದ್ದ.. ಇದರಿಂದ ರೋಸಿಹೋಗಿದ್ದ ವಿದ್ಯಾರ್ಥಿಗಳು ಶಿಕ್ಷಕನ ಮೇಲೆ ಚಪ್ಪಲಿ ಬೀಸಿದ್ದಾರೆ.. ಅಟ್ಟಾಡಿಸಿ ಶಾಲೆಯಿಂದ ಓಡಿಸಿದ್ದಾರೆ.

ಬೈಕ್‌ನಲ್ಲಿ ಬಂದ ಶಿಕ್ಷಕನನ್ನು ವಾಪಸ್‌;

ದಿನವೂ ಕಾಟ ಕೊಡುತ್ತಿದ್ದ ಶಿಕ್ಷಕನಿಂದ ಬೇಸತ್ತಿದ್ದ ವಿದ್ಯಾರ್ಥಿಗಳು ಇವತ್ತು ಏನಾದರೂ ಮಾಡಿ ಆತನಿಗೆ ಬುದ್ಧ ಕಲಿಸಬೇಕೆಂದು ನಿರ್ಧಾರ ಮಾಡಿದ್ದರು.. ಬೆಳಗ್ಗೆ ಶಿಕ್ಷಕ ಬರುತ್ತಿರುವುದನ್ನೇ ಕಾಯುತ್ತಿದ್ದರು.. ಬೈಕ್‌ ನಲ್ಲಿ ಬಂದ ಶಿಕ್ಷಕ ಕುಡಿದು ಬಂದಿರುವುದನ್ನು ಖಚಿತ ಮಾಡಿಕೊಂಡರು.. ಕೂಡಲೇ ಆಕ್ರೋಶಗೊಂಡ ವಿದ್ಯಾರ್ಥಿಗಳು ಸಿಕ್ಕ ಸಿಕ್ಕ ವಸ್ತುಗಳನ್ನು ತೆಗೆದುಕೊಂಡು ಬೀಸಿದರು.. ಚಪ್ಪಲಿ ತೆಗೆದುಕೊಂಡು ಎಸೆದರು.. ಏನು ಹೇಳಿದರೂ ವಿದ್ಯಾರ್ಥಿಗಳು ಕೇಳಲಿಲ್ಲ.. ಕೊನೆಗೆ ಶಿಕ್ಷಕ ಅಲ್ಲಿಂದ ಪರಾರಿಯಾಗಿದ್ದಾನೆ.. ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.. ಶಿಕ್ಷಕನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿಗಳ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

6 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

6 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

10 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

12 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

12 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

22 hours ago