ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ


ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ.

ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಸಂಧಾನಕಾರರಾಗಿ ಬಂದಿದ್ದಾರೆ. ಅವರ ಜೊತೆ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಹಾಗೂ ಎಂಎಲ್ ಸಿ ಡಿಎಸ್ ಅರುಣ್ ಭೇಟಿ ನೀಡಿದ್ದಾರೆ.

ಸೋಮವಾರ ಶಿವಮೊಗ್ಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ಈಶ್ವರಪ್ಪ ಬಂಡಾಯ ಶಮನವಾಗುವುದು ಬಿಜೆಪಿಗೆ ಮುಖ್ಯವಾಗಿದೆ. ಆದರೆ ರಾಧಾ ಮೋಹನ್ ದಾಸ್ ಅಗರವಾಲ್ ಸಭೆ ನಡುವೆಯೇ ಈಶ್ವರಪ್ಪ ಎದ್ದು ಹೊರ ಹೋಗಿದ್ದಾರೆ. ಈಗ ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ಈಶ್ವರಪ್ಪ ಬಳಿಕ ಮಾತುಕತೆಗೆ ಬಾರದೆ ವಿರೋಧ ತೋರಿದ್ದಾರೆ. ಹಲವು ಹೊತ್ತು ಕಾದು ಕುಳಿತ ನಾಯಕರು ಈಶ್ವರಪ್ಪ ಮನೆಯಿಂದ ಹೊರ ನಡೆದರು.

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೆಎಸ್ ಈಶ್ವರಪ್ಪ ಬಿಎಸ್ ವೈ ಕುಟುಂಬ ವಿರುದ್ಧ ಟೀಕೆ ಮಾಡಿದ್ದರು. “ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಪಿ ಮುಷ್ಟಿಯಲ್ಲಿರುವ ಪಕ್ಷವನ್ನು ತಪ್ಪಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ನೊಂದ ಕಾರ್ಯಕರ್ತರ ಧ್ವನಿಯಾಗಿ ನಾನು ಚುನಾವಣೆ ಸ್ಪರ್ಧಿಸುತ್ತೇನೆ. ಯಾರೇ ಬಂದು ಹೇಳಿದರೂ ನಾನು ಚುನಾವಣೆ ಎದುರಿಸುತ್ತೇನೆ. ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮಕ್ಕಳಿನಿಂದ ಪಕ್ಷ ಮುಕ್ತವಾಗಬೇಕು. ಹಾಗಾಗಿ ಚುನಾವಣೆ ಸ್ಪರ್ಧೆ ಮಾಡುತ್ತೇನೆ. ಯಡಿಯೂರಪ್ಪ ನೇತೃತ್ವದಲ್ಲಿ ತುಂಬಾ ಸೀಟು ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. ಬಿಜೆಪಿಯಲ್ಲಿ ಆಗುತ್ತಿರುವ ಕೆಟ್ಟ ರಾಜಕಾರಣ ಕೇಂದ್ರದ ನಾಯಕರಿಗೆ ಗೊತ್ತಾಗಬೇಕು ಎಂದು ಹೇಳಿದ್ದರು.

ಮೋದಿ ನನ್ನ ದೇವರು. ಪ್ರಾಣ ಹೋದರೂ ಮೋದಿ ಬಿಡಲಿಲ್ಲ. ಆದರೆ ನಾನು ರಾಘವೇಂದ್ರ ವಿರುದ್ಧ ಸ್ಪರ್ಧೆ ಮಾಡುತ್ತಿರುವುದು. ಹಾಗಾಗಿ ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಗೆದ್ದ ಮೇಲೆ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ನಾಳೆ ಅವರನ್ನು ಭೇಟಿ‌ ಮಾಡಲ್ಲ. ಚುನಾವಣೆ ಮಾಡುತ್ತಿದ್ದೇನೆ. ಹಾಗಾಗಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

1 hour ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

2 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

2 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

4 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

8 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

8 hours ago