ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು


ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ.

ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು ಹಾಕಿದ್ದು, ಯುವಕನ ದೇಹ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಮೃತಪಟ್ಟ ಯುವಕನ ಮನೆಯವರು ನಾಪತ್ತೆ(missing) ಪ್ರಕರಣದ ದಾಖಲಿಸಿದ ನಂತರ ಈ ಪ್ರಕರಣ ಬಯಲಿಗೆ ಬಂದಿದೆ.

ಕೊಲೆಯ ಪ್ರಕರಣವು ಪ್ರೇಮ ಪ್ರಕರಣವೆಂದು ಹೇಳಲಾಗುತ್ತಿದೆ. ಶಿಕಾರಿಪುರ ತಾಲೂಕಿನ ಯುವತಿ ಅಂಕಿತ ಎಂಬವರನ್ನು ವೀರೇಶ್ ಪ್ರೀತಿಸುತ್ತಿದ್ದನು. ಇಬ್ಬರು ಒಂದೇ ಜಾತಿಯವರಾಗಿದ್ದು ಹತ್ತಿರದ ಸಂಬಂಧಿಕರು ಆಗಿದ್ದರು. ಯುವತಿ ಶಿವಮೊಗ್ಗದ ಪೇಯಿಂಗ್ ಗೆಸ್ಟ್(ಪಿಜಿ)ಯಲ್ಲಿದ್ದು ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ ವಿಚಾರ ಮನೆಯವರಿಗೆ ಗೊತ್ತಾಗಿದ್ದು, ವಿರೋಧ ಮಾಡಿದ್ದಾರೆ. ಆದರೂ, ವಿರೇಶ್ ಮತ್ತು ಅಂಕಿತಾ ಸಂಬಂಧಿಕರಲ್ಲವಾ ಮೊದಲು, ವಿರೋಧಿಸಿ ಮದುವೆಯಾದ ನಂತರ ಒಪ್ಪಿಕೊಳ್ಳುತ್ತಾರೆಂದು ಭಾವಿಸಿದ್ದರು.

ಆದರೆ, ಯುವತಿ ಅಂಕಿತಾಳ ಸಹೋದರ ಪ್ರವೀಣ್ ಹಾಗೂ ಆತನ ಸಹಚರರು ನಿನ್ನೆ ಶಿವಮೊಗ್ಗದ ಗಾಡಿ ಕೊಪ್ಪದಲ್ಲಿರುವ ವೀರೇಶ್ ಮನೆಗೆ ಬಂದಿದ್ದರು. ನಂತರ ಯುವತಿಯನ್ನು ಮದುವೆ ಮದುವೆ ಮಾಡಿಕೊಡುವುದಾಗಿ ತಿಳಿಸಿ ಭರವಸೆ ನೀಡಿದ್ದರು. ಇದಾದ ನಂತರ, ತನ್ನ ತಂಗಿ ಇನ್ನೂ ಓದುವ ವಿದ್ಯಾರ್ಥಿನಿಯಾಗಿದ್ದಾಳೆ. ಹಾಗಾಗಿ, ನೀನು ಮತ್ತು ಅಂಕಿತಾ ಜೊತೆಯಲ್ಲಿರುವ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡಿಬಿಡು. ಒಂದು ವೇಳೆ ಎಲ್ಲಾದರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರೆ ಕಾಲೇಜಿನಲ್ಲಿ ಅವಳ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿ, ವೀರೇಶ್‌ನ ಮೊಬೈಲ್‌ನಲ್ಲಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಹೇಳಿದ್ದರು.

ತಾನು ಪ್ರೀತಿ ಮಾಡುವ ಯುವತಿ ಅಂಕಿತಾಳನ್ನು ಮದುವೆ ಮಾಡಿಕೊಡುವುದಾಗಿ ಅವರ ಮನೆಯವರೇ ಹೇಳಿದ್ದನ್ನು ನಂಬಿದ ವೀರೇಶ್, ತನ್ನ ಪ್ರೇಯಸಿಯೊಂದಿಗೆ ಇದ್ದ ಎಲ್ಲ ಫೋಟೋ, ವಿಡಿಯೋಗಳನ್ನು ಡಿಲೀಟ್ ಮಾಡಿದ್ದನು. ನಂತರ, ತಡರಾತ್ರಿ 10 ಗಂಟೆಗೆ ಅಂಕಿತಾ ಅಳುತ್ತಿದ್ದಾಳೆ, ನಿನ್ನನ್ನು ನೋಡಬೇಕು ಎನ್ನುತ್ತಿದ್ದಾಳೆ. ಈಗಲೇ ನೀನು ಮನೆಗೆ ಬಾ ಎಂದು ಕರೆ ಮಾಡಿದ್ದಾರೆ. ಇನ್ನು ಯುವತಿ ಮನೆಯವರು ಕರೆದಿದ್ದರಿಂದ ಯುವಕ ವೀರೇಶ್ ಇನ್ನೋವಾ ಕಾರನ್ನು ತೆಗೆದುಕೊಂಡು ತೊಗರ್ಸಿ ಬಳಿ ಹೋಗಿದ್ದಾನೆ. ಆಗ ಯುವಕ ವೀರೇಶನನ್ನು ರಸ್ತೆಯ ಬದಿಗೆ ಕರೆದೊಯ್ದು ಕಾರಿನಲ್ಲಿಯೇ ಕೂರಿಸಿ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

ಇನ್ನು ವೀರೇಶ್ ತಾಯಿ ಮಹದೇವಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ತನ್ನ ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಕೊನೆಯದಾಗಿ ಮಗ ವೀರೇಶ್ ಯುವತಿಯ ಸಂಬಂಧಿಕರು ಕರೆ ಮಾಡಿದ್ದರಿಂದ ಅವರ ಮನೆಗೆ ಹೋಗುವುದಾಗಿ ಕಾರಿನಲ್ಲಿ ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ತೊಗರ್ಸಿ ಬಳಿ ಕಾರು ಸುಟ್ಟಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ, ವಿರೇಶ್‌ನ ತಾಯಿಯನ್ನು ಕರೆಸಿ ಕಾರಿನ ನಂಬರ್ ಪ್ಲೇಟ್ ತೋರಿಸಿ ಕೇಳಿದ್ದಾರೆ. ಆಗ, ಇದು ತನ್ನ ಮಗ ತೆಗೆದುಕೊಂಡು ಹೋಗಿದ್ದ ಕಾರು ಎಂದು ಗುರುತಿಸಿದ್ದಾರೆ. ಇನ್ನು ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಯುವಕ ವಿರೇಶನದ್ದೇ ಎಂದು ಗುರುತಿಸಲಾಗಿದೆ. ಇನ್ನು ಪ್ರಕರಣವನ್ನು ಶಿರಾಳಕೊಪ್ಪ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

8 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

8 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

12 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

14 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

15 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago