ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ.


ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಹಾಗೂ ಇದು ಕೊಲೆಯೋ .? ಆತ್ಮಹತ್ಯೆಯೋ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು.

ಇದೀಗ ಈ ಘಟನೆಯ ಬಗ್ಗೆ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಪೊಲೀಸ್ ಪ್ರಕಟಣೆಯಲ್ಲಿ ಏನಿದೆ..???

ಹುಂಚಾ ಗ್ರಾಮದ ಮುತ್ತಿನ ಕೆರೆ ನೀರಿನಲ್ಲಿ ತೇಲುತಿದ್ದ ಮೃತದೇಹವನ್ನು ನೀರಿನಿಂದ ಹೊರತೆಗೆದು ನೋಡಿದಾಗ ಸುಮಾರು 45 ರಿಂದ 50 ವರ್ಷ ಪ್ರಾಯದ ಅನಾಮಧೇಯ ಹೆಂಗಸಾಗಿದ್ದು, ಶವಕ್ಕೆ ಅರಿಶಿಣ ಬಣ್ಣದ ಪ್ಲಾಸ್ಟಿಕ್ ಹಗ್ಗದಿಂದ ಕುತ್ತಿಗೆ ಮತ್ತು ತೊಡೆಯ ಭಾಗಕ್ಕೆ ಮತ್ತು ಎರಡೂ ಕಾಲಿಗೆ ಬಿಗಿಯಾಗಿ ಕಟ್ಟಿ,ಹೊಟ್ಟೆಯ ಭಾಗದಲ್ಲಿ ಸುಮಾರು 3-1/2 ಅಡಿ ಉದ್ದದ ಕಲ್ಲಿನ ಬೇಲಿ ಕಂಬದ ತುಂಡನ್ನು ಕಟ್ಟಿ,ಯಾವುದೋ ಉದ್ದೇಶದಿಂದ,ಎಲ್ಲಿಯೋ ಕೊಲೆ ಮಾಡಿ, ಕೊಲೆಯನ್ನು ಮರೆಮಾಚುವ ದುರುದ್ದೇಶದಿಂದ ಹುಂಚಾ ಗ್ರಾಮದ ಮುತ್ತಿನ ಕೆರೆ ನೀರಿಗೆ ತಂದು ಹಾಕಿದ್ದು ಕಂಡು ಬಂದಿರುತ್ತದೆ.ಮೃತ ದೇಹವನ್ನು ಮೂರು ನಾಲ್ಕು ದಿನ ಹಿಂದೆ ಕೊಲೆ ಮಾಡಿ ನೀರಿಗೆ ಹಾಕಿರಬಹುದಾಗಿದ್ದು, ಕೊಳೆತ ಸ್ಥಿತಿಯಲ್ಲಿರುತ್ತದೆ. ಮೃತ ಅನಾಮಧೇಯ ಹೆಂಗಸಿನ ವಾರಸು ದಾರರು ಮತ್ತು ಕೊಲೆ ಮಾಡಿದ ಆರೋಪಿತರ ಪತ್ತೆಗೆ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ38/2024ಕಲಂ:302,201 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.


ಸುಮಾರು 45 ರಿಂದ 50 ವರ್ಷ ಪ್ರಾಯ,5.2 ಅಡಿ ಉದ್ದ,ಕಪ್ಪು ಮೈಬಣ್ಣ, ದುಂಡು ಮುಖ,ದಪ್ಪ ಶರೀರ, 8 ಇಂಚು ಉದ್ದದ ನೀಳವಾದ ಕಪ್ಪು,ಕೆಂಪು ಮತ್ತು ಬಿಳಿ ತಲೆಕೂದಲು,ಕುತ್ತಿಗೆಯಲ್ಲಿ 7 ಕೀಗಳಿರುವ ಒಂದು ಬಿಳಿಬಣ್ಣದ ದಾರ.ಕಿವಿಯಲ್ಲಿ ಬಂಗಾರದಂತಿರುವ ಬಿಳಿ ಹರಳಿನ ಕಿವಿಓಲೆ,ಎಡ ಮೂಗಿನಲ್ಲಿ ಚಿಕ್ಕ ಮೂಗುತಿ ಧರಿಸಿದ್ದು, ಹಸಿರು ಬಣ್ಣದ ರವಿಕೆ,ತಿಳಿಗುಲಾಬಿ ಬಣ್ಣದ ಸೀರೆ,ಗಿಳಿ ಹಸಿರು ಬಣ್ಣದ ಒಳಲಂಗ ಧರಿಸಿರುತ್ತಾಳೆ.

ಮೃತದೇಹದ ಜೊತೆಗೆ ಕೆಂಪು ಬಣ್ಣದ ಎಲೆ ಅಡಿಕೆ ಚೀಲ ದೊರೆತಿದ್ದು,ಅದರಲ್ಲಿ ಬಂಗಾರದಂತಿರುವ ಎರಡು ತಾಳಿ, ಒಂದು ಜೊತೆ ಕಿವಿಓಲೆ ಮತ್ತು ಪಾಣಿ, ಬಂಗಾರದಂತಿರುವ ಒಂದು ಸಣ್ಣ ಉಂಗುರ ಇರುತ್ತದೆ.


ಮೃತ ಅನಾಮಧೇಯ ಹೆಂಗಸಿನ ಸುಳಿವು ದೊರೆತಲ್ಲಿ ಈ ಕೆಳಗಿನ ಅಧಿಕಾರಿಯವರಿಗೆ ಮುಖತಃ ಅಥವಾ ದೂರವಾಣಿ ಮೂಲಕ ಸಂಪರ್ಕಿಸಲು ಕೋರಲಾಗಿದೆ.

1) ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ- 08181-220388

2) ಪೊಲೀಸ್ ನಿರೀಕ್ಷಕರು, ಹೊಸನಗರ ವೃತ್ತ.-08185-221544.  ಮೊಬೈಲ್ ನಂಬರ್ 9480803337

3) ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್ ಪೇಟೆ ಪೊಲೀಸ್ ಠಾಣೆ-08185-242635.ಮೊಬೈಲ್ ನಂಬರ್ 9480803365
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

45 minutes ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

52 minutes ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

1 hour ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

4 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

7 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

8 hours ago