ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ.


ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಹಾಗೂ ಇದು ಕೊಲೆಯೋ .? ಆತ್ಮಹತ್ಯೆಯೋ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು.

ಇದೀಗ ಈ ಘಟನೆಯ ಬಗ್ಗೆ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಪೊಲೀಸ್ ಪ್ರಕಟಣೆಯಲ್ಲಿ ಏನಿದೆ..???

ಹುಂಚಾ ಗ್ರಾಮದ ಮುತ್ತಿನ ಕೆರೆ ನೀರಿನಲ್ಲಿ ತೇಲುತಿದ್ದ ಮೃತದೇಹವನ್ನು ನೀರಿನಿಂದ ಹೊರತೆಗೆದು ನೋಡಿದಾಗ ಸುಮಾರು 45 ರಿಂದ 50 ವರ್ಷ ಪ್ರಾಯದ ಅನಾಮಧೇಯ ಹೆಂಗಸಾಗಿದ್ದು, ಶವಕ್ಕೆ ಅರಿಶಿಣ ಬಣ್ಣದ ಪ್ಲಾಸ್ಟಿಕ್ ಹಗ್ಗದಿಂದ ಕುತ್ತಿಗೆ ಮತ್ತು ತೊಡೆಯ ಭಾಗಕ್ಕೆ ಮತ್ತು ಎರಡೂ ಕಾಲಿಗೆ ಬಿಗಿಯಾಗಿ ಕಟ್ಟಿ,ಹೊಟ್ಟೆಯ ಭಾಗದಲ್ಲಿ ಸುಮಾರು 3-1/2 ಅಡಿ ಉದ್ದದ ಕಲ್ಲಿನ ಬೇಲಿ ಕಂಬದ ತುಂಡನ್ನು ಕಟ್ಟಿ,ಯಾವುದೋ ಉದ್ದೇಶದಿಂದ,ಎಲ್ಲಿಯೋ ಕೊಲೆ ಮಾಡಿ, ಕೊಲೆಯನ್ನು ಮರೆಮಾಚುವ ದುರುದ್ದೇಶದಿಂದ ಹುಂಚಾ ಗ್ರಾಮದ ಮುತ್ತಿನ ಕೆರೆ ನೀರಿಗೆ ತಂದು ಹಾಕಿದ್ದು ಕಂಡು ಬಂದಿರುತ್ತದೆ.ಮೃತ ದೇಹವನ್ನು ಮೂರು ನಾಲ್ಕು ದಿನ ಹಿಂದೆ ಕೊಲೆ ಮಾಡಿ ನೀರಿಗೆ ಹಾಕಿರಬಹುದಾಗಿದ್ದು, ಕೊಳೆತ ಸ್ಥಿತಿಯಲ್ಲಿರುತ್ತದೆ. ಮೃತ ಅನಾಮಧೇಯ ಹೆಂಗಸಿನ ವಾರಸು ದಾರರು ಮತ್ತು ಕೊಲೆ ಮಾಡಿದ ಆರೋಪಿತರ ಪತ್ತೆಗೆ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ38/2024ಕಲಂ:302,201 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.


ಸುಮಾರು 45 ರಿಂದ 50 ವರ್ಷ ಪ್ರಾಯ,5.2 ಅಡಿ ಉದ್ದ,ಕಪ್ಪು ಮೈಬಣ್ಣ, ದುಂಡು ಮುಖ,ದಪ್ಪ ಶರೀರ, 8 ಇಂಚು ಉದ್ದದ ನೀಳವಾದ ಕಪ್ಪು,ಕೆಂಪು ಮತ್ತು ಬಿಳಿ ತಲೆಕೂದಲು,ಕುತ್ತಿಗೆಯಲ್ಲಿ 7 ಕೀಗಳಿರುವ ಒಂದು ಬಿಳಿಬಣ್ಣದ ದಾರ.ಕಿವಿಯಲ್ಲಿ ಬಂಗಾರದಂತಿರುವ ಬಿಳಿ ಹರಳಿನ ಕಿವಿಓಲೆ,ಎಡ ಮೂಗಿನಲ್ಲಿ ಚಿಕ್ಕ ಮೂಗುತಿ ಧರಿಸಿದ್ದು, ಹಸಿರು ಬಣ್ಣದ ರವಿಕೆ,ತಿಳಿಗುಲಾಬಿ ಬಣ್ಣದ ಸೀರೆ,ಗಿಳಿ ಹಸಿರು ಬಣ್ಣದ ಒಳಲಂಗ ಧರಿಸಿರುತ್ತಾಳೆ.

ಮೃತದೇಹದ ಜೊತೆಗೆ ಕೆಂಪು ಬಣ್ಣದ ಎಲೆ ಅಡಿಕೆ ಚೀಲ ದೊರೆತಿದ್ದು,ಅದರಲ್ಲಿ ಬಂಗಾರದಂತಿರುವ ಎರಡು ತಾಳಿ, ಒಂದು ಜೊತೆ ಕಿವಿಓಲೆ ಮತ್ತು ಪಾಣಿ, ಬಂಗಾರದಂತಿರುವ ಒಂದು ಸಣ್ಣ ಉಂಗುರ ಇರುತ್ತದೆ.


ಮೃತ ಅನಾಮಧೇಯ ಹೆಂಗಸಿನ ಸುಳಿವು ದೊರೆತಲ್ಲಿ ಈ ಕೆಳಗಿನ ಅಧಿಕಾರಿಯವರಿಗೆ ಮುಖತಃ ಅಥವಾ ದೂರವಾಣಿ ಮೂಲಕ ಸಂಪರ್ಕಿಸಲು ಕೋರಲಾಗಿದೆ.

1) ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ- 08181-220388

2) ಪೊಲೀಸ್ ನಿರೀಕ್ಷಕರು, ಹೊಸನಗರ ವೃತ್ತ.-08185-221544.  ಮೊಬೈಲ್ ನಂಬರ್ 9480803337

3) ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್ ಪೇಟೆ ಪೊಲೀಸ್ ಠಾಣೆ-08185-242635.ಮೊಬೈಲ್ ನಂಬರ್ 9480803365
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

7 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

7 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

11 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

13 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

14 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

23 hours ago