ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ ಮಾಡುವಾಗ ಪ.ಜಾ/ಪ.ಪಂಗಡ -01, ಮಹಿಳೆ-01 ಮತ್ತು ಸಾಮಾನ್ಯ-0 ಮೀಸಲಾತಿ ನಿಗದಿಪಡಿಸಲಾಗಿದೆ.
ಈಗಾಗಲೇ ನಿಗಮದ ಫ್ರಾಂಚೈಸಿಗಳು ಈ ಯೋಜನೆಯಡಿ ಅವರ ಮೀನು ಮಾರಾಟ ಜಾಲವನ್ನು ವಿಸ್ತರಿಸಲು ಬಯಸಿದಲ್ಲಿ ಅವರಿಗೆ ಆದ್ಯತೆ ನೀಡಲಾಗುವುದು.
ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರಿಕೆ ಇಲಾಖೆಯಿಂದ ಅನುಮೋದಿತ ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೀನುಗಾರಿಕೆ ಸಹಕಾರ ಸಂಘಗಳು/ಒಕ್ಕೂಟಗಳು, ಮಹಿಳಾ ಸ್ವಸಹಾಯ ಗುಂಪುಗಳು, ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ನಿರುದ್ಯೋಗಿ ಯುವಕ/ಯುವತಿಯರು/ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿಗಳನ್ನು ಆದ್ಯತೆಗನುಸಾಋ ಪರಿಗಣಿಸಲಾಗುವುದು.
ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ ಮೊತ್ತ ರೂ. 1.00 ಲಕ್ಷ, ಸಾಮಾನ್ಯ ವರ್ಗದವರು ಮತ್ತು ಪ.ಜಾತಿ/ಪ.ಪಂಗಡ/ಮಹಿಳೆ ರೂ. 0.50 ಲಕ್ಷವನ್ನು ನೀಡಬೇಕಿರುತ್ತದೆ. ಹಾಗೂ ಮಾಸಿಕ ರೂ. 3,000/- ಬಾಡಿಗೆ ಮೊತ್ತವನ್ನು ಪಾವತಿಸಬೇಕಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ ಮತ್ತು ತೀರ್ಥಹಳ್ಳಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್