ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ.

ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಿಂದ ಬಂದಿರುವ ಅಧಿಕಾರಿಗಳು ತೀರ್ಥಹಳ್ಳಿ ಪೊಲೀಸ್‌ ಮೂಲಗಳನ್ನು ಬಳಸಿಕೊಂಡು ಈ ದಾಳಿ ನಡೆಸಿದ್ದಾರೆ. ಅಲ್ಲದೆ ರಾಮೇಶ್ವರಂ ಕಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸ್ತಿದ್ದಾರೆ

ಶಿವಮೊಗ್ಗ ಜಿಲ್ಲೆ ಪೊಲೀಸರು ಇತ್ತೀಚೆಗೆ ಗಾಂಜಾ ಕೇಸ್‌ನಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದರು. ಆತ ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಪತ್ತೆ ಮಾಡಿದ್ದ. ಆತನ ಸಹೋದರನೇ ಆರೋಪಿಯಾಗಿದ್ದು, ಪೊಲೀಸರ ಬಳಿ ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಖಾತರಿಗೊಳಿಸಿದ್ದ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ಪಡೆದುಕೊಂಡಿದ್ದು ಎನ್‌ಐಎ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಐಸಿಸ್‌ ಮ್ಯಾಡುಲ್‌ ಮೇಲೆ ಎನ್‌ಐಎ ಅಧಿಕಾರಿಗಳ ಕಣ್ಣು ನೆಟ್ಟಿದ್ದು, ಮಹತ್ವದ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಸ್ಟೇಷನ್‌ ಪೊಲೀಸರು ಈ ಹಿಂದೆ ಅರೆಸ್ಟ್‌ ಮಾಡಿದ್ದ ಆರೋಪಿಗಳು ಜಬೀ, ಯಾಸಿನ್‌, ಮಾಜ್‌ ಸೇರಿದಂತೆ ಹಲವರು ಕೇರಳ ಐಸಿಸ್‌ ಮ್ಯಾಡುಲ್‌ ಜೊತೆಗೆ ಸಂಪರ್ಕದಲ್ಲಿದ್ದರ ಬಗ್ಗೆ ಮಾಹಿತಿ ಸ್ಪಷ್ಟವಾಗಿದೆ.

ಇವರೆಲ್ಲರೂ ಐಸಿಸ್‌ ಸಂಘಟನೆ ಸೇರುವ ಸಲುವಾಗಿ ದುಷ್ಕೃತ್ಯಗಳನ್ನು ಎಸೆಗುತ್ತಿದ್ದರು. ಈ ಮೂಲಕ ತಮ್ಮ ಸಾಮರ್ಥ್ಯ ತೋರಿ ಸಂಘಟನೆಗೆ ಸೇರಲು ಮುಂದಾಗಿದ್ದರು ಎನ್ನಲಾಗಿದೆ.  ಐಸಿಸ್‌ ಸಂಘಟನೆಗೆ ರಿಕ್ಯೂಟ್‌ ಮಾಡುತ್ತಿರುವ ಆರೋಪಿಗಳಲ್ಲಿ ಅಪ್ಸರ್‌ ಫಾಷಾ, ಅರಾಫತ್‌ ಅಲಿ ಹಾಗೂ ಶಾರೀಖ್‌ ಮುಖ್ಯ ವ್ಯಕ್ತಿಗಳಾಗಿದ್ದಾರೆ. ದೇಶದ ಭದ್ರತಾ ಸಂಸ್ಥೆ ಇಂತಹ ವ್ಯಕ್ತಿಗಳ ಮೇಲೆ ಹಾಗೂ ಸಂಘಟನೆ ಮೇಲೆ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶಂಕಿತರು ತಮ್ಮ ಕಾರ್ಯತಂತ್ರವನ್ನು ಸಹ ಬದಲಾಯಿಸಿದ್ದರು ಎಂಬ ಮಾಹಿತಿ ಇದೆ. ಆರೋಪಿಗಳು ಯಾವುದೋ ಒಂದು ಶಂಕಿತ ಚಟುವಟಿಕೆ ನಡೆಸಿ ಎನ್‌ಐಎ ಅಧಿಕಾರಿಗಳ ಟಾರ್ಗೆಟ್‌ ಆದ ಬಳಿಕವಷ್ಟೆ ಅವರನ್ನ ಆತಂಕವಾದಿ ಸಂಘಟನೆಗಳು ತಮ್ಮ ಸಂಘಟನೆಗೆ ಸೇರಿಸಿಕೊಳ್ಳುತ್ತಿವೆ. ಈ ಕಾರಣಕ್ಕೆ ಮೊದಲು ಯಾಸೀನ್‌, ಮಾಜ್‌,  ನಂತರ ಶಾರೀಖ್‌,  ಇದೀಗ ಮುಸಾವೀರ್‌ ಅಲಿಯಾಸ್‌ ಶಾಜೀಬ್‌ ದುಷ್ಕೃತ್ಯಗಳನ್ನು ಎಸೆಗಿದ್ದಾರೆ ಎನ್ನಲಾಗಿದೆ.

ಶಾಜಿಬ್‌ ಹಾಗೂ ಮತೀನ್‌ ಬೆಂಗಳೂರಿನಲ್ಲಿ ನಡೆದ ಸ್ಫೋಟದ ಕೃತ್ಯದಲ್ಲಿ ಪಾಲ್ಗೊಂಡಿದ್ದು, ಅವರ ಕೈವಾಡ ಶಿವಮೊಗ್ಗ ತುಂಗಾ ನದಿ ತೀರದ ಟ್ರಯಲ್‌ ಬ್ಲಾಸ್ಟ್‌ ಹಾಗೂ ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದಲ್ಲಿಯು ಇರುವುದು ಎನ್‌ಐಎ ಅಧಿಕಾರಿಗಳಿಗೆ ತಿಳಿದಿದೆ. ಇಷ್ಟೆ ಅಲ್ಲದೆ ತೀರ್ಥಹಳ್ಳಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಮಿಸ್ಸಿಂಗ್‌ ಇದ್ದು, ಅವರ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಶಿವಮೊಗ್ಗ ಪೊಲೀಸ್‌ ಇಲಾಖೆಯು ಹೆಚ್ಚಿನ ಗಮನ ಹರಿಸುತ್ತಿದೆ. ಇದರ ನಡುವೆ ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸ್ತಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

4 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

4 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

8 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

10 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

11 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

20 hours ago